News Karnataka Kannada
Saturday, April 27 2024
ಕ್ರೀಡೆ

“ಆನಂದ.. ಪರಮಾನಂದ”: ಆರ್‌ಸಿಬಿ ಗೆ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದ ಚಹಲ್

Rcb
Photo Credit : Twitter

ದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್​ಗಳಿಂದ ಬಗ್ಗು ಬಡಿದು ಆರ್‌ಸಿಬಿ ಕಿರೀಟ ಮುಡಿಗೇರಿಸಿಕೊಂಡಿದೆ.

ಇತ್ತ ಆರ್​ಸಿಬಿ ತಂಡ ಗೆಲ್ಲುತ್ತಿದ್ದಂತೆ, ಅತ್ತ ಸಂಭ್ರಮಿಸಿದವರಲ್ಲಿ ಯುಜ್ವೇಂದ್ರ ಚಹಲ್ ಕೂಡ ಒಬ್ಬರು. ಆದರೆ ಚಹಲ್ ಅವರದ್ದು ಕೇವಲ ಸಂಭ್ರಮವಾಗಿರಲಿಲ್ಲ. ಅದು ಪರಮಾನಂದವಾಗಿತ್ತು. ಇದನ್ನು ಟೀಮ್ ಇಂಡಿಯಾ ಆಟಗಾರ ಕನ್ನಡದಲ್ಲೇ ತಿಳಿಸಿದ್ದು ವಿಶೇಷ.

ಹೌದು, ಆರ್​ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆ ಯುಜ್ವೇಂದ್ರ ಚಹಲ್ ತಮ್ಮ ಎಕ್ಸ್ ಖಾತೆಯಲ್ಲಿ ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದರು. ಕನ್ನಡದಲ್ಲೇ “ಆನಂದ.. ಪರಮಾನಂದ…. ಪರಮಾನಂದ….” ಎಂದು ಬರೆದುಕೊಳ್ಳುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡಿದ್ದರು. ಮಾಜಿ ಆರ್​ಸಿಬಿ ಆಟಗಾರನ ಅಭಿಮಾನಕ್ಕೆ ಅಭಿಮಾನಿಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಯುಜ್ವೇಂದ್ರ ಚಹಲ್ 2014 ರಿಂದ 2021 ರವರೆಗೆ ಆರ್​ಸಿಬಿ ಪರ ಆಡಿದ್ದರು. 7 ಸೀಸನ್​ಗಳಲ್ಲಿ 50 ಪಂದ್ಯಗಳಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಚಹಲ್ ಒಟ್ಟು 64 ವಿಕೆಟ್ ಪಡೆದಿದ್ದರು.  ಆದರೆ ಐಪಿಎಲ್​ 2022 ರಲ್ಲಿ ಚಹಲ್ ಅವರನ್ನು ಆರ್​ಸಿಬಿ ರಿಲೀಸ್ ಮಾಡಿತ್ತು. ಇದೀಗ ಯುಜ್ವೇಂದ್ರ ಚಹಲ್ ರಾಜಸ್ಥಾನ್ ರಾಯಲ್ಸ್ ತಂಡದ ಭಾಗವಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು