ಕಾಮನ್ ವೆಲ್ತ್ ಗೇಮ್ಸ್: ವೆಟ್ ಲಿಪ್ಟಿಂಗ್ ವಿಭಾಗದಲ್ಲಿ ನಿರೀಕ್ಷೆಗೂ ಮೀರಿದ ಪ್ರದರ್ಶನ ತೋರಿರುವ ಭಾರತ ಒಟ್ಟರೆಯಾಗಿ 6 ಪದಕಗಳನ್ನು ಗಳಿಸಿಕೊಟ್ಟಿದೆ. ಸಾಯಿಖೋಮ್ ಮೀರಾಬಾಯಿ ಚಾನು (ಚಿನ್ನ), ಸಂಕೇತ್ ಮಹಾದೇವ್ ಸರ್ಗರ್ ಮತ್ತು ಬಿಂದ್ಯಾರಾಣಿ ದೇವಿ (ಬೆಳ್ಳಿ) ಮತ್ತು ಗುರುರಾಜ ಪೂಜಾರಿ (ಕಂಚಿನ) ಟೂರ್ನಿಯ ಪದಕ ವೀರರಾಗಿದ್ದಾರೆ.
ಭಾನುವಾರ ನಡೆದ ಇತರ ವಿಭಾಗಗಳ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಮಹಿಳಾ ಕ್ರಿಕೆಟ್ ತಂಡವು ಪಾಕಿಸ್ತಾನವನ್ನು ಎಂಟು ವಿಕೆಟ್ಗಳಿಂದ ಸೋಲಿಸಿದೆ. ಪುರುಷರ ಹಾಕಿ ತಂಡವು ತನ್ನ ಆರಂಭಿಕ ಪಂದ್ಯದಲ್ಲಿ ಘಾನಾ ವಿರುದ್ಧ 11-0 ಅಂತರದ ಅಮೋಘ ಜಯ ಸಾಧಿಸಿತು.
ಬ್ಯಾಡ್ಮಿಂಟನ್ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಜಯಗಳಿಸುವ ಮೂಲಕ ಸೆಮಿಫೈನಲ್ ಸ್ಥಾನವನ್ನು ಕಾಯ್ದಿರಿಸಿದೆ. ಪುರುಷರ ಟೇಬಲ್ ಟೆನಿಸ್ ತಂಡವು ಬಾಂಗ್ಲಾದೇಶದ ವಿರುದ್ಧ ಸುಲಭ ಗೆಲುವಿನೊಂದಿಗೆ ಮುಂದಡಿ ಇಟ್ಟಿದೆ. ಬಾಕ್ಸಿಂಗ್ ತಾರೆ ನಿಖತ್ ಜರೀನ್ ತನ್ನ ಮೊದಲ ಪಂದ್ಯವನ್ನು ಗೆದ್ದಿದ್ದಾರೆ. ಆದರೆ ಮತ್ತೊಬ್ಬ ಭಾಕ್ಸರ್ ಶಿವ ಥಾಪಾ ಭಾರೀ ಫೈಪೋಟಿಯ ಪಂದ್ಯದಲ್ಲಿ ಸೋತರು.
ಮೂರು ಚಿನ್ನ, ಎರಡು ಬೆಳ್ಳಿ ಮತ್ತು ಒಂದು ಕಂಚಿನೊಂದಿಗೆ ಭಾರತ (ಆರು ಪದಕಗಳು) ಗಳಿಸಿರುವ ಪದಕ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಜಿಗಿದಿದೆ. ಆಸ್ಟ್ರೇಲಿಯಾ 50 ಪದಕಗಳೊಂದಿಗೆ (20 ಚಿನ್ನ, 13 ಬೆಳ್ಳಿ, 17 ಕಂಚು) ಅಗ್ರಸ್ಥಾನದಲ್ಲಿ ಮುಂದುವರಿದಿದೆ. 12 ಚಿನ್ನ ಸೇರಿದಂತೆ 34 ಅಂಕಗಳೊಂದಿಗೆ ಇಂಗ್ಲೆಂಡ್ ಎರಡನೇ ಸ್ಥಾನದಲ್ಲಿದೆ. 10 ಚಿನ್ನ 3 ಬೆಳ್ಳಿ ಪದಕಗಳೊಂದಿಗೆ 19 ನ್ಯೂಜಿಲೆಂಡ್ ಮೂರನೇ ಸ್ಥಾನದಲ್ಲಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…