ಇಂಗ್ಲೆಂಡ್: ಏಕದಿನ ವಿಶ್ವಕಪ್ ಶುರುವಾಗಲು ಇನ್ನು ಕೇವಲ ತಿಂಗಳು ಮಾತ್ರ ಉಳಿದಿವೆ. ಆದರೆ ಅದಕ್ಕೂ ಮುನ್ನವೇ ಇಂಗ್ಲೆಂಡ್ ವೇಗಿ ಸ್ಟೀವನ್ ಫಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಹೀಗೆ ದಿಢೀರ್ ನಿವೃತ್ತಿ ಘೋಷಿಸಲು ಮುಖ್ಯ ಕಾರಣ ಮೊಣಕಾಲು ಗಾಯದ ಸಮಸ್ಯೆ ಎಂದು ತಿಳಿಸಿದ್ದಾರೆ.
34 ವರ್ಷದ ಸ್ಟೀವನ್ ಫಿನ್ ಮೊಣಕಾಲು ಗಾಯದ ಸಮಸ್ಯೆಯ ಕಾರಣ ಕಳೆದೊಂದು ವರ್ಷದಿಂದ ಮೈದಾನಕ್ಕಿಳಿದಿರಲಿಲ್ಲ. ಇದೀಗ ಎಲ್ಲಾ ಮಾದರಿಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ ಎಂದು ಫಿನ್ ತಿಳಿಸಿದ್ದಾರೆ.
“ನಾನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಮಾದರಿಯ ಕ್ರಿಕೆಟ್ನಿಂದ ನಿವೃತ್ತಿಯಾಗುತ್ತಿದ್ದೇನೆ. ಕಳೆದ 12 ತಿಂಗಳಿಂದ ನನ್ನ ದೇಹದೊಂದಿಗೆ ಹೋರಾಡುತ್ತಿದ್ದೇನೆ. ಇದೀಗ ನಾನು ಸೋಲನ್ನು ಒಪ್ಪಿಕೊಂಡಿದ್ದೇನೆ. ಈ ಸೋಲಿನೊಂದಿಗೆ ಕ್ರಿಕೆಟ್ ಬದುಕಿಗೆ ವಿದಾಯ ಹೇಳುತ್ತಿರುವುದಾಗಿ’ ಸ್ಟೀವನ್ ಫಿನ್ ತಿಳಿಸಿದ್ದಾರೆ.
ಇಂಗ್ಲೆಂಡ್ ಪರ 36 ಟೆಸ್ಟ್ಗಳು ಸೇರಿದಂತೆ 125 ಪಂದ್ಯಗಳನ್ನು ಆಡಿರುವುದು ನಾನು ಕನಸು ಕಂಡಿದ್ದನ್ನು ಮೀರಿಸಿದೆ. ಕಳೆದ 12 ತಿಂಗಳುಗಳಲ್ಲಿ ವಿಶೇಷವಾಗಿ ಸಸೆಕ್ಸ್ ಕ್ರಿಕೆಟ್ ಕ್ಲಬ್ ನೀಡಿದ ಬೆಂಬಲಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು. ಹಾಗೆಯೇ ನನ್ನನ್ನು ಬೆಂಬಲಿಸಿದ ಪ್ರತಿಯೊಬ್ಬರಿಗೂ ಇದೇ ವೇಳೆ ಧನ್ಯವಾದ ತಿಳಿಸಲು ಬಯಸುತ್ತೇನೆ ಎಂದು ಸ್ಟೀವನ್ ಫಿನ್ ತಿಳಿಸಿದ್ದಾರೆ.
ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…
ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.
ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.
ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.