Categories: ಕ್ರೀಡೆ

ಟೆಸ್ಟ್ ಸರಣಿ​: ಭಾರತದ ವಿರುದ್ಧ ಬಲಿಷ್ಠ ಇಂಗ್ಲೆಂಡ್​ ಟೀಂ ಪ್ರಕಟ

ಸೌತ್​​ ಆಫ್ರಿಕಾದ ಪ್ರವಾಸ ಬೆನ್ನಲ್ಲೇ ಟೀಮ್​ ಇಂಡಿಯಾ ಇಂಗ್ಲೆಂಡ್​​ ವಿರುದ್ಧ 5 ಪಂದ್ಯಗಳ ಟೆಸ್ಟ್​ ಸರಣಿ ಆಡಲಿದೆ. ಜನವರಿ 25ರಂದು ಶುರುವಾಗೋ ಈ ಟೆಸ್ಟ್​ ಸರಣಿಗೆ ಬಲಿಷ್ಠ ಇಂಗ್ಲೆಂಡ್​​ ತಂಡ ಪ್ರಕಟವಾಗಿದೆ.

ಇಂಗ್ಲೆಂಡ್​​​​ ತಂಡವು ಬೆನ್​ ಸ್ಟೋಕ್ಸ್​​ ನಾಯಕತ್ವದಲ್ಲಿ ಟೀಂ ಇಂಡಿಯಾದ ವಿರುದ್ಧ ಐದು ಟೆಸ್ಟ್​ಗಳು ಆಡಲಿದೆ. ಮೊದಲ ಟೆಸ್ಟ್​ ಪಂದ್ಯವೂ ಹೈದರಾಬಾದಿನ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ 25ರಂದು ನಡೆಯಲಿದೆ. ಇನ್ನು, 2ನೇ ಟೆಸ್ಟ್ ಫೆಬ್ರವರಿ 2 ರಿಂದ ವಿಶಾಖಪಟ್ನಂನಲ್ಲಿ, 3ನೇ ಟೆಸ್ಟ್​​ ರಾಜ್​ಕೋಟ್​ನಲ್ಲಿ, 4ನೇ ಟೆಸ್ಟ್ ರಾಂಚಿ ಮತ್ತು ಕೊನೇ ಟೆಸ್ಟ್ ಧರ್ಮಶಾಲಾದಲ್ಲಿ ನಡೆಯಲಿದೆ.

ಇನ್ನು ತಂಡದಲ್ಲಿ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರನ್ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್​ಗೆ ಸ್ಥಾನ ಸಿಕ್ಕಿಲ್ಲ. ಶೋಯೆಬ್ ಬಶೀರ್, ಟಾಮ್ ಹಾರ್ಟ್ಲಿ ಮತ್ತು ಗಸ್ ಅಟ್ಕಿನ್ಸನ್ ಅನ್ನೋ ಹೊಸಬರಿಗೆ ಮಣೆ ಹಾಕಲಾಗಿದೆ.

ತಂಡದಲ್ಲಿ ಬೆನ್ ಸ್ಟೋಕ್ಸ್ (ಕ್ಯಾಪ್ಟನ್​), ರೆಹಾನ್ ಅಹ್ಮದ್, ಜೇಮ್ಸ್ ಆಂಡರ್ಸನ್, ಗುಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋ (ವಿಕೆಟ್ ಕೀಪರ್), ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಜಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫಾಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲ್ಲಿ ರಾಬಿನ್ಸನ್, ಜೋ ರೂಟ್ ಮತ್ತು ಮಾರ್ಕ್ ವುಡ್ ಸ್ಥಾನ ಪಡೆದುಕೊಂಡಿದ್ದಾರೆ.

 

Ashitha S

Recent Posts

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

12 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

33 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

60 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

1 hour ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

2 hours ago