News Karnataka Kannada
Friday, May 10 2024
ಕ್ರೀಡೆ

ಇಂಗ್ಲೆಂಡ್‌ VS ಭಾರತ: ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ

Cricket
Photo Credit : Twitter

ಮ್ಯಾಂಚೆಸ್ಟರ್‌ನಲ್ಲಿ ಆತಿಥೇಯ ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ 3ನೇ ಹಾಗೂ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಸದ್ಯ ಸರಣಿ 1-1ರಲ್ಲಿ ಸಮಬಲದಲ್ಲಿದೆ. ಮೊದಲ ಏಕದಿನ ಪಂದ್ಯವನ್ನು ರೋಹಿತ್ ಶರ್ಮಾ ಪಡೆ 10 ವಿಕೆಟ್‌ಗಳಿಂದ ಗೆದ್ದಿದ್ದರೆ, ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ 100 ರನ್‌ಗಳ ಭರ್ಜರಿ ಜಯದೊಂದಿಗೆ ಕಮ್‌ ಬ್ಯಾಕ್‌  ಮಾಡಿತ್ತು. ಎರಡನೇ ODI ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಪಡೆ ಸಂಪೂರ್ಣ ವಿಫಲತೆ ಕಂಡಿತ್ತು. 246 ರನ್‌ ಬೆನ್ನಟ್ಟಿದ್ದ ಭಾರತ ಕೇವಲ 146 ರನ್‌ಗಳಿಗೆ ಆಲೌಟ್ ಆಗಿ ಹೀನಾಯ ಸೋಲು ಕಂಡಿತ್ತು.

ಬೆನ್ನುನೋವಿನಿಂದಾಗಿ ಜಸ್ಪ್ರೀತ್ ಬುಮ್ರಾ ಪಂದ್ಯದಿಂದ ಹೊರಗುಳಿದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ತಂಡದಿಂದ  ಕೈಬಿಡಲಾಗಿದೆ ಎಂದು ಟಾಸ್ ಗೆದ್ದ ನಂತರ ರೋಹಿತ್ ಶರ್ಮಾ ಹೇಳಿದ್ದಾರೆ.

ಅರ್ಷದೀಪ್ (ಸಿಂಗ್) ಅವರು ಇನ್ನೂ ಬಲ ಹೊಟ್ಟೆಯ ಒತ್ತಡದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಆದ್ದರಿಂದ ಈ ಪಂದ್ಯದಲ್ಲಿ ಬೂಮ್ರಾ ಸ್ಥಾನದಲ್ಲಿ ಮೊಹಮದ್‌ ಸಿರಾಜ್‌ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು