Categories: ಕ್ರೀಡೆ

ಸಿಎಸ್​ಕೆ ಫ್ಯಾನ್ಸ್​ಗಳ ಮಧ್ಯೆ ಏಕಾಂಗಿ ಲಕ್ನೋ ಅಭಿಮಾನಿಯ ಸೆಲೆಬ್ರೇಶನ್‌

ಚೆನ್ನೈ: ಕಳೆದ ದಿನ (ಏ.23) ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್​​ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ರೋಚಕ ಪಂದ್ಯದಲ್ಲಿ ಸಿಎಸ್​ಕೆ ನೀಡಿದ 211 ಬೃಹತ್ ಗುರಿಯನ್ನು ಬೆನ್ನಟ್ಟಿದ ಲಕ್ನೋ ಪಡೆಗೆ ಆಸರೆಯಾದ ಮಾರ್ಕಸ್​ ಸ್ಟೋಯಿನಿಸ್​ ಬ್ಯಾಟಿಂಗ್ ಆರ್ಭಟಕ್ಕೆ ರುತುರಾಜ್ ಪಡೆ ತತ್ತರಿಸಿ ಹೋಯಿತು.

ಈ ಮೂಲಕ ಸತತ ಎರಡನೇ ಬಾರಿ ಒಂದೇ ತಂಡದ ಎದುರು ಚೆನ್ನೈ ಸೋಲನ್ನು ಅನುಭವಿಸಿತು. ಕಡೆಯ ಓವರ್​ನಲ್ಲಿ ಮುಸ್ತುಫಿಸರ್​ ಬೌಲಿಂಗ್​​​ಗೆ ಸಿಕ್ಸರ್​, ಫೋರ್​​ ಬಾರಿಸಿದ ಸ್ಟೋಯಿನಿಸ್​, ಮೂರನೇ ಬಾಲ್​ಗೆ ಜನರಿದ್ದ ಸ್ಟ್ಯಾಂಡ್ಸ್​ನತ್ತ ಮತ್ತೊಂದು ಸಿಕ್ಸರ್ ಬಾರಿಸಿದರು. ಈ ಮೂಲಕ ಗೆಲುವಿನ ಕೇಕೆ ಹಾಕಿದರು.

ಈ ವೇಳೆ ಸ್ಟೇಡಿಯಂನಲ್ಲಿ ಜಮಾಯಿಸಿದ್ದ ಲಕ್ನೋ ಅಭಿಮಾನಿಗಳು ತಂಡದ ಗೆಲುವನ್ನು ಸಂಭ್ರಮಿಸುತ್ತಿದ್ದಾರೆ. ಅತ್ತ ಸಿಎಸ್​ಕೆ ಪರವಿದ್ದ ಅಪಾರ ಸಂಖ್ಯೆಯ ಫ್ಯಾನ್ಸ್​ಗಳ ಮಧ್ಯೆ ​ ಏಕಾಂಗಿಯಾಗಿ ಕುಳಿತು ಸಂಭ್ರಮಿಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.

ತಮ್ಮ ತಂಡ ಸತತ ಸೋಲನ್ನು ನೋಡಿತಲ್ಲವೇ ಎಂದು ಮೌನಕ್ಕೆ ಜಾರಿದ್ದ ಹಳದಿ ಜೆರ್ಸಿ ಧರಿಸಿದ್ದ ಸಿಎಸ್​ಕೆ ಅಭಿಮಾನಿಗಳ ಮಧ್ಯೆ ಲಕ್ನೋ ಸೂಪರ್ ಜೈಂಟ್ಸ್ ಅಭಿಮಾನಿ ಕುಣಿದು, ಕುಪ್ಪಳಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಆತ ಲಕ್ಕಿ ಫೆಲೋ ಎಂದಿದ್ದಾರೆ.

Ashitha S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago