ಚೆನ್ನೈ: ಕಳೆದ ದಿನ (ಏ.23) ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ರೋಚಕ ಪಂದ್ಯದಲ್ಲಿ ಸಿಎಸ್ಕೆ ನೀಡಿದ 211 ಬೃಹತ್ ಗುರಿಯನ್ನು ಬೆನ್ನಟ್ಟಿದ ಲಕ್ನೋ ಪಡೆಗೆ ಆಸರೆಯಾದ ಮಾರ್ಕಸ್ ಸ್ಟೋಯಿನಿಸ್ ಬ್ಯಾಟಿಂಗ್ ಆರ್ಭಟಕ್ಕೆ ರುತುರಾಜ್ ಪಡೆ ತತ್ತರಿಸಿ ಹೋಯಿತು.
ಈ ಮೂಲಕ ಸತತ ಎರಡನೇ ಬಾರಿ ಒಂದೇ ತಂಡದ ಎದುರು ಚೆನ್ನೈ ಸೋಲನ್ನು ಅನುಭವಿಸಿತು. ಕಡೆಯ ಓವರ್ನಲ್ಲಿ ಮುಸ್ತುಫಿಸರ್ ಬೌಲಿಂಗ್ಗೆ ಸಿಕ್ಸರ್, ಫೋರ್ ಬಾರಿಸಿದ ಸ್ಟೋಯಿನಿಸ್, ಮೂರನೇ ಬಾಲ್ಗೆ ಜನರಿದ್ದ ಸ್ಟ್ಯಾಂಡ್ಸ್ನತ್ತ ಮತ್ತೊಂದು ಸಿಕ್ಸರ್ ಬಾರಿಸಿದರು. ಈ ಮೂಲಕ ಗೆಲುವಿನ ಕೇಕೆ ಹಾಕಿದರು.
ಈ ವೇಳೆ ಸ್ಟೇಡಿಯಂನಲ್ಲಿ ಜಮಾಯಿಸಿದ್ದ ಲಕ್ನೋ ಅಭಿಮಾನಿಗಳು ತಂಡದ ಗೆಲುವನ್ನು ಸಂಭ್ರಮಿಸುತ್ತಿದ್ದಾರೆ. ಅತ್ತ ಸಿಎಸ್ಕೆ ಪರವಿದ್ದ ಅಪಾರ ಸಂಖ್ಯೆಯ ಫ್ಯಾನ್ಸ್ಗಳ ಮಧ್ಯೆ ಏಕಾಂಗಿಯಾಗಿ ಕುಳಿತು ಸಂಭ್ರಮಿಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.
ತಮ್ಮ ತಂಡ ಸತತ ಸೋಲನ್ನು ನೋಡಿತಲ್ಲವೇ ಎಂದು ಮೌನಕ್ಕೆ ಜಾರಿದ್ದ ಹಳದಿ ಜೆರ್ಸಿ ಧರಿಸಿದ್ದ ಸಿಎಸ್ಕೆ ಅಭಿಮಾನಿಗಳ ಮಧ್ಯೆ ಲಕ್ನೋ ಸೂಪರ್ ಜೈಂಟ್ಸ್ ಅಭಿಮಾನಿ ಕುಣಿದು, ಕುಪ್ಪಳಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಆತ ಲಕ್ಕಿ ಫೆಲೋ ಎಂದಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…