ರಾಯಲ್ ಚಾಲೆಂಜರ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ನಡುವೆ ಇಂದು ಎಲಿಮಿನೇಟೆಡ್ ಪಂದ್ಯ ನಡೆಯಲಿಕ್ಕಿದೆ. ಆರ್ಸಿಬಿ ಸುದ್ದಿಗೋಷ್ಠಿಯನ್ನ ರದ್ದುಗೊಳಿಸಿದೆ ಎಂಬ ಮಾತುಗಳು ಕೇಳಿಬಂದಿದ್ದು, ಜೊತೆಗೆ ಆರ್ಸಿಬಿ ಅಭ್ಯಾಸವನ್ನು ಕೂಡ ರದ್ದು ಗೊಳಿಸಿದೆ.
ಆರ್ಸಿಬಿ ಮಂಗಳವಾರದಂದು ಗುಜರಾತ್ ಕಾಲೇಜು ಮೈದಾನದಲ್ಲಿ ಅಭ್ಯಾಸ ನಡೆಸಬೇಕಾಗಿತ್ತು. ಆದರೆ ಯಾವುದೇ ಕಾರಣವನ್ನು ಬಿಚ್ಚಿಡದೆ ಆರ್ಸಿಬಿ ಅಭ್ಯಾಸವನ್ನು ರದ್ದುಗೊಳಿಸಿತು. ಅತ್ತ ರಾಜಸ್ಥಾನ್ ತಂಡ ಅಭ್ಯಾಸವನ್ನು ಮುಂದುವರೆಸಿತು. ವಿರಾಟ್ ಕೊಹ್ಲಿಗೆ ಭದ್ರತಾ ಬೆದರಿಕೆ ಇರುವ ಕಾರಣ ಆರ್ಸಿಬಿ ಸುದ್ದಿಗೋಷ್ಟಿ ನಡೆಸಿಲ್ಲ ಎಂಬ ಮಾತುಗಳು ಕೇಳಿಬಂದಿವೆ.
ಗುಜರಾತ್ ಪೊಲೀಸರು ಸೋಮವಾರದಂದು ಭಯೋತ್ಪಾದಕರು ಎಂಬ ಶಂಕೆ ಮೇಲೆ ನಾಲ್ವರನ್ನು ಗುಜರಾತ್ ವಿಮಾನ ನಿಲ್ದಾಣದಲ್ಲಿ ಬಂಧಿಸಿದರು. ವಿಚಾರಣೆ ನಡೆಸಿದ ಬಳಿಕ ಬಂಧಿತರ ಅಡುಗು ತಾಣವನ್ನು ಪತ್ತೆಹಚ್ಚಿದ್ದಾರೆ. ಬಂಧಿತರಿಂದ ಶಸ್ತ್ರಾಸ್ತ್ರ ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
Ad