ಬೆಂಗಳೂರು: ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147 ರನ್ಗೆ ಆಲೌಟ್ ಮಾಡಿದೆ.
ಇನ್ನು, ಟಾಸ್ ಸೋತರೂ ಫಸ್ಟ್ ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ತಂಡವು ಆರ್ಸಿಬಿ ಬೌಲರ್ಗಳ ದಾಳಿಗೆ ತತ್ತರಿಸಿದೆ.
ಆರ್ಸಿಬಿ ಪರ ಸಿರಾಜ್, ಯಶ್ ದಯಾಳ್, ವೈಶಾಕ್ ತಲಾ 2 ವಿಕೆಟ್ ತೆಗೆದ್ರು. ಕ್ಯಾಮೆರಾನ್ ಗ್ರೀನ್ ಮತ್ತು ಕರಣ್ ಶರ್ಮಾ ತಲಾ 1 ವಿಕೆಟ್ ತೆಗೆದರು.
ಆರಂಭದಲ್ಲೇ ಬ್ಯಾಕ್ ಟು ಬ್ಯಾಕ್ 3 ವಿಕೆಟ್ ಕಳೆದುಕೊಂಡು ಗುಜರಾತ್ ಟೈಟನ್ಸ್ ಸಂಕಷ್ಟಕ್ಕೆ ಸಿಲುಕಿತ್ತು. ಸಾಹಾ 1, ಗಿಲ್ 2, ಸಾಯ್ ಸುದರ್ಶನ್ 6 ರನ್ಗಳಿಗೆ ಔಟಾದ್ರು.
ಬಳಿಕ ಬಂದ ಶಾರುಖ್ ಖಾನ್ ಕ್ರೀಸ್ನಲ್ಲೇ ನಿಂತು 1 ಸಿಕ್ಸರ್, 5 ಫೋರ್ ಸಮೇತ 37 ರನ್ ಸಿಡಿಸಿದ್ರು. ಡೇವಿಡ್ ಮಿಲ್ಲರ್ ಕೂಡ ಶಾರುಖ್ಗೆ ಸಾಥ್ ನೀಡಿದ್ದು, 20 ಬಾಲ್ನಲ್ಲಿ 2 ಸಿಕ್ಸರ್, 3 ಫೋರ್ನೊಂದಿಗೆ 30 ರನ್ ಪೇರಿಸಿದ್ರು.
ರಾಹುಲ್ ತೆವಾಟಿಯಾ ಮತ್ತು ರಶೀದ್ ಖಾನ್ ಭರ್ಜರಿ ಆಟ ಆಡಿದ್ರು. ತೆವಾಟಿಯಾ 21 ಬಾಲ್ನಲ್ಲಿ 1 ಸಿಕ್ಸರ್, 5 ಫೋರ್ ಸಮೇತ 35 ರನ್, ರಶೀದ್ ಖಾನ್ 1 ಸಿಕ್ಸ್, 2 ಫೋರ್ನೊಂದಿಗೆ 18 ರನ್ ಚಚ್ಚಿದ್ರು. ವಿಜಯ್ ಶಂಕರ್ 10 ರನ್ಗೆ ವಿಕೆಟ್ ಒಪ್ಪಿಸಿದ್ರು.
ಕಬಿನಿ ಜಲಾಶಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಅವರ ಬಳಿ ಇದ್ದ ₹32 ಲಕ್ಷವನ್ನು ದೋಚಿಕೊಂಡು…
ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಪತ್ತೆಯಾಗಿದೆ. ಇದು ಶಿವಮೊಗ್ಗ ಜಿಲ್ಲೆಯ ಕೆಳದಿ ಅರಸರ ಕಾಲದ…
ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…
ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.