Categories: ಕ್ರೀಡೆ

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಬೆಂಗಳೂರು: ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147 ರನ್​​ಗೆ ಆಲೌಟ್​ ಮಾಡಿದೆ.

ಇನ್ನು, ಟಾಸ್​ ಸೋತರೂ ಫಸ್ಟ್​ ಬ್ಯಾಟಿಂಗ್​ ಮಾಡಿದ ಗುಜರಾತ್​ ಟೈಟನ್ಸ್​ ತಂಡವು ಆರ್​​ಸಿಬಿ ಬೌಲರ್​​ಗಳ ದಾಳಿಗೆ ತತ್ತರಿಸಿದೆ.

ಆರ್​​ಸಿಬಿ ಪರ ಸಿರಾಜ್​​, ಯಶ್​ ದಯಾಳ್​​, ವೈಶಾಕ್​​ ತಲಾ 2 ವಿಕೆಟ್​ ತೆಗೆದ್ರು. ಕ್ಯಾಮೆರಾನ್​ ಗ್ರೀನ್​ ಮತ್ತು ಕರಣ್​ ಶರ್ಮಾ ತಲಾ 1 ವಿಕೆಟ್​ ತೆಗೆದರು.

ಆರಂಭದಲ್ಲೇ ಬ್ಯಾಕ್​ ಟು ಬ್ಯಾಕ್​​ 3 ವಿಕೆಟ್​ ಕಳೆದುಕೊಂಡು ಗುಜರಾತ್​ ಟೈಟನ್ಸ್​​​ ಸಂಕಷ್ಟಕ್ಕೆ ಸಿಲುಕಿತ್ತು. ಸಾಹಾ 1, ಗಿಲ್​ 2, ಸಾಯ್​ ಸುದರ್ಶನ್​​ 6 ರನ್​ಗಳಿಗೆ ಔಟಾದ್ರು.

ಬಳಿಕ ಬಂದ ಶಾರುಖ್​ ಖಾನ್​​​ ಕ್ರೀಸ್​ನಲ್ಲೇ ನಿಂತು 1 ಸಿಕ್ಸರ್​​, 5 ಫೋರ್​ ಸಮೇತ 37 ರನ್​ ಸಿಡಿಸಿದ್ರು. ಡೇವಿಡ್​ ಮಿಲ್ಲರ್​ ಕೂಡ ಶಾರುಖ್​ಗೆ ಸಾಥ್​ ನೀಡಿದ್ದು, 20 ಬಾಲ್​ನಲ್ಲಿ 2 ಸಿಕ್ಸರ್​, 3 ಫೋರ್​ನೊಂದಿಗೆ 30 ರನ್​ ಪೇರಿಸಿದ್ರು.

ರಾಹುಲ್​ ತೆವಾಟಿಯಾ ಮತ್ತು ರಶೀದ್​ ಖಾನ್​ ಭರ್ಜರಿ ಆಟ ಆಡಿದ್ರು. ತೆವಾಟಿಯಾ 21 ಬಾಲ್​ನಲ್ಲಿ 1 ಸಿಕ್ಸರ್​​, 5 ಫೋರ್​ ಸಮೇತ 35 ರನ್​​, ರಶೀದ್​ ಖಾನ್​​ 1 ಸಿಕ್ಸ್​​, 2 ಫೋರ್​ನೊಂದಿಗೆ 18 ರನ್​ ಚಚ್ಚಿದ್ರು. ವಿಜಯ್​ ಶಂಕರ್​​ 10 ರನ್​ಗೆ ವಿಕೆಟ್​ ಒಪ್ಪಿಸಿದ್ರು.

Ashika S

Recent Posts

ಎಚ್.ಡಿ.ಕೋಟೆ: ಕಬಿನಿ ಜಲಾಶಯಕ್ಕೆ ಹಾರಿ ನೌಕರ ಆತ್ಮಹತ್ಯೆ

ಕಬಿನಿ ಜಲಾಶಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

6 mins ago

ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ₹32 ಲಕ್ಷ ದರೋಡೆ

ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಅವರ ಬಳಿ ಇದ್ದ ₹32 ಲಕ್ಷವನ್ನು ದೋಚಿಕೊಂಡು…

7 mins ago

ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಬಟ್ಟೆ ತೊಳೆಯಲು ಬಳಕೆ!

ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಪತ್ತೆಯಾಗಿದೆ. ಇದು ಶಿವಮೊಗ್ಗ ಜಿಲ್ಲೆಯ ಕೆಳದಿ ಅರಸರ ಕಾಲದ…

11 mins ago

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

34 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

54 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

1 hour ago