ಹುಬ್ಬಳ್ಳಿ: ಭಾರತ ತಂಡದ ಖ್ಯಾತ ಕ್ರಿಕೆಟ್ ಆಟಗಾರ ಕೆ.ಎಲ್.ರಾಹುಲ್ ವಿದ್ಯಾರ್ಥಿಯೊಬ್ಬನಿಗೆ ಆರ್ಥಿಕ ನೆರವು ನೀಡುವ ಮೂಲಕ ಶಿಕ್ಷಣಕ್ಕೆ ಸಹಾಯ ಮಾಡಿದ್ದಾರೆ.
ಅಮೃತ ಮಾವಿನಕಟ್ಟಿ ಎಂಬುವಂತ ಮಹಲಿಂಗಪುರದ ಸಾಮಾನ್ಯ ಯುವಕ ಮೊನ್ನೆಯಷ್ಟೇ ಪಿಯುಸಿ ಕಾಮರ್ಸನಲ್ಲಿ 600ಕ್ಕೆ 571 ಅಂಕಗಳನ್ನು ಪಡೆದಿದ್ದಾನೆ. ಆದರೆ ಕಡುಬಡತನದಲ್ಲಿರುವ ಈ ಯುವಕ ಕಳೆದ ಕೆಲವು ದಿನಗಳ ಹಿಂದೆಯಷ್ಟೇ ತಾಯಿ ತೀರಿ ಹೋಗಿದ್ದಾರೆ. ಆದರೆ ಓದಲೇ ಬೇಕು ಎಂಬುವಂತ ಛಲ ಯುವಕನನ್ನು ಹುಬ್ಬಳ್ಳಿಯ ಮಂಜುನಾಥ ಅವರನ್ನು ಭೇಟಿ ಮಾಡಿಸಿದೆ. ಅದೃಷ್ಟವಶಾತ್ ಮಂಜುನಾಥ ಅವರು ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್.ರಾಹುಲ್ ಅವರೊಂದಿಗೆ ಮಾತನಾಡಿ ಯುವಕನ ಶಿಕ್ಷಣಕ್ಕೆ ಆರ್ಥಿಕ ನೆರವು ಕೊಡಿಸಿದ್ದಾರೆ.
ಇನ್ನೂ ಯುವಕ ಬಿಕಾಂ ಓದಲು ಕೆಎಲ್ಇ ಸಂಸ್ಥೆಯ ಬಿವ್ಹಿಬಿ ಕಾಲೇಜಿಗೆ ಬಂದಿದ್ದಾನೆ. ಆತನ ಪರಿಸ್ಥಿತಿ ಹಾಗೂ ಆತನ ಅಂಕಗಳನ್ನು ನೋಡಿದ ಆಡಳಿತ ಮಂಡಳಿ 10 ಸಾವಿರ ರಿಯಾಯಿತಿ ನೀಡಿದೆ. ಆದರೆ ಉಳಿದ ಹಣವನ್ನು ತುಂಬಲು ಸಾಧ್ಯವಾಗದೇ ಇದ್ದಾಗ ಕೆ.ಎಲ್.ರಾಹುಲ್ 75 ಸಾವಿರ ಹಣವನ್ನು ಯುವಕನ ಖಾತೆಗೆ ಜಮಾ ಮಾಡಿದ್ದು, ಯುವಕನ ಭವಿಷ್ಯಕ್ಕೆ ಬೆಳಕಾಗಿದ್ದಾರೆ.