News Karnataka Kannada
Monday, April 29 2024
ಕ್ರೀಡೆ

ಏಕದಿನ ವಿಶ್ವಕಪ್: ಭಾರತಕ್ಕೆ 257ರನ್‌ ಗುರಿ ನೀಡಿದ ಬಾಂಗ್ಲಾ

ಪುಣೆ
Photo Credit : News Kannada

ಪುಣೆ: ಪುಣೆಯಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ ಭಾರತದ ದಾಳಿಗೆ ನಲುಗಿ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 256 ಕಲೆಹಾಕಿದೆ.

ಬಾಂಗ್ಲಾದೇಶದ ಪರ ಆರಂಭಿಕ ಆಟಗಾರ ಲಿಟನ್ ದಾಸ್ 66 ರನ್ ಗಳಿಸಿದರೆ, ಭಾರತದ ಪರ ಜಸ್ಪ್ರೀತ್ ಬುಮ್ರಾ ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಸಿರಾಜ್ ತಲಾ ಎರಡು ವಿಕೆಟ್ ಪಡೆದರು.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ತಂಜಿದ್ ಹಸನ್ ಹಾಗೂ ಲಿಟನ್ ದಾಸ್ ಅವರ ಆಕರ್ಷಕ ಅರ್ಧಶತಕಗಳ ನೆರವಿನಿಂದ ಗದಿತ 50 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 256 ರನ್ ಸೇರಿಸಿದೆ. ಈ ಮೂಲಕ ಟೂರ್ನಿಯಲ್ಲಿ ಸತತ ನಾಲ್ಕನೇ ಗೆಲುವಿನ ತವಕದಲ್ಲಿರುವ ಟೀಂ ಇಂಡಿಯಾ ಗೆಲುವಿಗೆ 257 ರನ್ ಗಳ ಟಾರ್ಗೆಟ್ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು