News Karnataka Kannada
Monday, April 29 2024
ಕ್ರೀಡೆ

ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಅಮಾನತುಗೊಳಿಸಿದ ಐಸಿಸಿ..!

Icc
Photo Credit : Twitter

ನವದೆಹಲಿ: ಏಕದಿನ ವಿಶ್ವಕಪ್ ನಡುವೆಯೇ ಐಸಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಭಾರತದ ನೆರೆಯ ರಾಷ್ಟ್ರವಾದ ಶ್ರೀಲಂಕಾದ ಕ್ರಿಕೆಟ್ ಸದಸ್ಯತ್ವವನ್ನು ರದ್ದುಗೊಳಿಸಿದೆ. ಇದರಿಂದಾಗಿ ಈಗ ಈ ತಂಡಕ್ಕೆ ಇನ್ನು ಮುಂದೆ ಒಂದೇ ಒಂದು ಅಂತಾರಾಷ್ಟ್ರೀಯ ಪಂದ್ಯವನ್ನಾಡಲು ಸಾಧ್ಯವಾಗುವುದಿಲ್ಲ ಎಂಬುದು ಆಘಾತಕ್ಕಾರಿ ಸಂಗತಿಯಾಗಿದೆ.

ಐಸಿಸಿ ನಿಯಮಗಳನ್ನು ಉಲ್ಲಂಘಿಸಿದ ಕಾರಣ ಇಂದು(ನ.10) ಶ್ರೀಲಂಕಾ ಕ್ರಿಕೆಟ್‌ನ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ. ಶ್ರೀಲಂಕಾ ಸರ್ಕಾರ, ಕ್ರಿಕೆಟ್ ಮಂಡಳಿಯಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಐಸಿಸಿ ಸಭೆಯಲ್ಲಿ ಕಂಡುಬಂದಿದೆ. ಇದು ಐಸಿಸಿ ನಿಯಮಗಳಿಗೆ ವಿರುದ್ಧವಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಐಸಿಸಿ ಈ ದೊಡ್ಡ ನಿರ್ಧಾರ ಕೈಗೊಂಡಿದೆ.

ವಾಸ್ತವವಾಗಿ ಈ ಬಾರಿಯ ವಿಶ್ವಕಪ್‌ನಲ್ಲಿ ಶ್ರೀಲಂಕಾ ತಂಡ, ಭಾರತದ ವಿರುದ್ಧ 302 ರನ್‌ಗಳಿಂದ ಹೀನಾಯ ಸೋಲು ಕಂಡಿತ್ತು. ಆ ಬಳಿಕ ಶ್ರೀಲಂಕಾ ಸರ್ಕಾರವು ಇಡೀ ಮಂಡಳಿಯನ್ನು ವಜಾಗೊಳಿಸಿತು. ಕ್ರೀಡಾ ಸಚಿವ ರೋಷನ್ ರಣಸಿಂಗ್ ಅವರು ಈ ನಿರ್ಧಾರ ಕೈಗೊಂಡಿದ್ದರು. ಲಂಕಾ ಸರ್ಕಾರದ ಈ ಹಸ್ತಕ್ಷೇಪ ಐಸಿಸಿ ನಿಯಮಗಳಿಗೆ ವಿರುದ್ಧವಾಗಿದ್ದು, ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಅಮಾನತುಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ.

 

ಶ್ರೀಲಂಕಾ ಕ್ರಿಕೆಟ್ ಮಂಡಳಿಯಲ್ಲಿ ಹಲವು ಬದಲಾವಣೆಗಳಾಗಿವೆ. ಮಂಡಳಿಯಲ್ಲಿ ಸರ್ಕಾರದ ಹಸ್ತಕ್ಷೇಪವನ್ನು ಗಮನಿಸಿರುವ ಐಸಿಸಿ, ಲಂಕಾ ಕ್ರಿಕೆಟ್ ತಂಡ ಶುಕ್ರವಾರ ತವರಿಗೆ ಮರಳಿದ ನಂತರ ಈ ನಿರ್ಧಾರವನ್ನು ಪ್ರಕಟಿಸಿದೆ. ಈ ಬಗ್ಗೆ ಐಸಿಸಿ ಇಂದು ಸಭೆ ನಡೆಸಿದ್ದು, ಈ ಸಭೆಯಲ್ಲಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಐಸಿಸಿಯ ನಿಯಮವನ್ನು ಉಲ್ಲಂಘಿಸಿದೆ ಎಂಬ ನಿರ್ಧಾರಕ್ಕೆ ಬಂದಿದೆ. ಅಲ್ಲದೆ ಲಂಕಾ ಮಂಡಳಿಯು ತನ್ನ ವ್ಯವಹಾರಗಳಲ್ಲಿ ಶ್ರೀಲಂಕಾ ಸರ್ಕಾರದ ಹಸ್ತಕ್ಷೇಪವನ್ನು ತಡೆಯುವಲ್ಲಿ ವಿಫಲವಾಗಿದೆ. ಹೀಗಾಗಿ ಲಂಕಾ ಮಂಡಳಿಯನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2.2 / 5. Vote count: 17

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು