ಆಟದಲ್ಲಿ ಸ್ವಯಂ ಶಿಸ್ತು ಹೊಂದಿದ್ದರೆ ಯಶಸ್ವಿ ಆಟಗಾರರಾಗಲು ಸಾಧ್ಯ- ಪ್ರೇಮನಾಥ ಶೆಟ್ಟಿ

ಮಂಗಳೂರು, ಏ.17: ಶಕ್ತಿನಗರದ ಶಕ್ತಿ ಪಪೂ ಕಾಲೇಜಿನ ಮೈದಾನದಲ್ಲಿ ಕಬಡ್ಡಿ ಆಯ್ಕೆ ಪ್ರಕ್ರಿಯೆಯನ್ನು ಎಡಪದವು ವಿವೇಕಾನಂದ ಪಪೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೇಮನಾಥ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಾವು ಸ್ವಯಂ ಶಿಸ್ತನ್ನು ಈ ಆಟದಲ್ಲಿ ಹೊಂದಬೇಕು. ಆಗ ನಾವು ಯಶಸ್ವಿ ಆಟಗಾರರಾಗಿ ಗುರುತಿಸಿಕೊಳ್ಳಲು ಸಾಧ್ಯವಿದೆ. ಕಬಡ್ಡಿ ಆಟವಾಡ ಬೇಕಾದರೆ ನಾವು ಖೋ ಖೋ, ವಾಲಿಬಾಲ್‌ ಹಾಗೂ ಇತರೆ ಆಟವನ್ನಾಡಿದಾಗ ಇದನ್ನು ಸುಲಭವಾಗಿ ಆಟವಾಡಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಕಬಡ್ಡಿಯಲ್ಲಿ ತನ್ನಕೌಶಲ್ಯದ ಪ್ರದರ್ಶನ, ತಾಳ್ಮೆಯ ಪ್ರದರ್ಶನದಿಂದ ಯಶಸ್ವಿ ಆಟಗಾರರಾಗಿ ಹೊರ ಹೊಮ್ಮಲು ಸಾಧ್ಯವಿದೆ. ಕ್ರೀಡೆಗೆ ಶಕ್ತಿ ವಿದ್ಯಾ ಸಂಸ್ಥೆಯು ಹೆಚ್ಚಿನ ಉತ್ತೇಜನ ನೀಡುತ್ತಿರುವ ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ.ಸಿ ನಾಯ್ಕ್ ರನ್ನುಅಭಿನಂದಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕಬಡ್ಡಿಯ ಆಟದ ಬಗ್ಗೆ ಅನೇಕ ರೀತಿಯ ಒಳ್ಳೆಯ ಕೌಶಲ್ಯವನ್ನು ತಿಳಿಸಿಕೊಟ್ಟು ಹೊಸದಾಗಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿರುವ ರಾಜ್ಯದ 116 ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಕ್ತಿ ಎಜ್ಯುಕೇಶನ್‌ಟ್ರಸ್ಟ್ನ ಪ್ರಧಾನ ಸಲಹೆಗಾರರ ಮೇಶ್ ಕೆ. ಮಾತನಾಡಿ, ಶಕ್ತಿ ವಿದ್ಯಾ ಸಂಸ್ಥೆಯು ಕಳೆದ 2 ವರ್ಷಗಳಿಂದ ಕಬಡ್ಡಿಯ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಮತ್ತು ಪಾಠ ಪ್ರವಚನವನ್ನು ಮಾಡುತ್ತಿದೆ. ಇದರ ಪರಿಣಾಮವಾಗಿ ಶಕ್ತಿ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯವನ್ನು ಅಖಿಲ ಭಾರತೀಯ ಮಟ್ಟದಲ್ಲಿ ಪ್ರತಿನಿಧಿಸಿರುತ್ತಾರೆ.

ಕಬಡ್ಡಿಯ ವಿದ್ಯಾರ್ಥಿಗಳು 90% ರಿಂದ 97% ವರೆಗೆ ಅಂಕ ಪಡೆದು ತೇರ್ಗಡೆಯಾಗಿರುವುದು ಇಲ್ಲಿಯ ವಿಶೇಷ. ಆಟದ ಜೊತೆ ನಿರಂತರ ಪಾಠ ಪ್ರವಚನವು ನಡೆಯುತ್ತಿದೆ. ವಿದ್ಯಾ ಭಾರತಿ ಅಖಿಲ ಭಾರತ ಮಟ್ಟದಲ್ಲಿ ಕಂಚು ಪದಕ ಪಡೆದಿರುವುದು ಇವರ ಸಾಧನೆಯಾಗಿದೆ. ಮುಂದಿನ ದಿನಗಳಲ್ಲಿಯೂ ಸಂಸ್ಕಾರಯುತ ಶಿಕ್ಷಣ ನೀಡಿಅವರನ್ನುತೇರ್ಗಡೆ ಮಾಡುವುದು ನಮ್ಮಉದ್ದೇಶ.

ಈ ಬಾರಿಯೂ 116 ವಿದ್ಯಾರ್ಥಿಗಳು ಕಬಡ್ಡಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದು ಅವರಲ್ಲಿ 10 ಜನ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಸಂಪೂರ್ಣಉಚಿತ ಶಿಕ್ಷಣ ನೀಡಲಾಗುವುದು. ಒಟ್ಟು 35 ವಿದ್ಯಾರ್ಥಿಗಳಿಗೆ ವರ್ಷ ಪೂರ್ತಿಉಚಿತ ಶಿಕ್ಷಣ ನೀಡಲಾಗುವುದು. ಇದಲ್ಲದೆ ಕ್ರೀಡೆಗೆ ವರ್ಷದಲ್ಲಿ 30ಲಕ್ಷ ರೂಪಾಯಿಯನ್ನುಖರ್ಚು ಮಾಡುತ್ತಿರುವುದು ಸಂಸ್ಥೆಯ ವಿಶೇಷತೆ. ವೇದಿಕೆಯಲ್ಲಿ ಪಾಟ್ನ ಪ್ರೋ-ಕಬಡ್ಡಿಆಟಗಾರ ರಂಜಿತ್ ನಾಯ್ಕ ಉಪಸ್ಥಿತರಿದ್ದು ಇವರನ್ನು ಮತ್ತು ಪ್ರೇಮನಾಥ್ ಶೆಟ್ಟಿಯವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ.ಸಿ ನಾಯ್ಕ್, ಕಾರ್ಯದರ್ಶಿ ಸಂಜೀತ್ ನಾಯ್ಕ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸ್ವಾಗತವನ್ನು ಶಕ್ತಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ಪೃಥ್ವಿರಾಜ್ ನಡೆಸಿದರು. ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದರ ವಿಶಂಕರ್ ಹೆಗಡೆ ವಂದಿಸಿದರು. ಕಾರ್ಯಕ್ರಮವನ್ನುಅಧ್ಯಾಪಕರಾದ ಶರಣಪ್ಪ ನಿರೂಪಿಸಿದರು.

Gayathri SG

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

14 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago