ರಾಯ್ಪುರ: ಇಂದು ರಾಯ್ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಾಲ್ಕನೇ ಟಿ20 ಪಂದ್ಯ ನಡೆಯಲಿದೆ.
ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ಈಗಾಗಲೇ 2-1 ಅಂತರದಿಂದ ಮುನ್ನಡೆ ಪಡೆಕೊಂಡಿದ್ದು, ಇಂದಿನ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಕಾಂಗರೂ ಪಡೆಗೆ ಉಳಿದ ಎರಡೂ ಪಂದ್ಯ ಗೆಲ್ಲಲೇ ಬೇಕಿದೆ. ಕಳೆದ ಪಂದ್ಯದಲ್ಲಿ ಭಾರತ 200+ ರನ್ ಕಲೆಹಾಕಿದರೂ ಸೋಲುಂಡಿತ್ತು.
ಹೀಗಾಗಿ ಟೀಮ್ ಇಂಡಿಯಾ ಯೋಜನೆ ರೂಪಿಸಿ ಕಣಕ್ಕಿಳಿಯಬೇಕಿದೆ. ಹೀಗೆ ಅನೇಕ ಕಾರಣಗಳಿಂದ ಉಭಯ ತಂಡಗಳ ಇಂದಿನ ಕಾದಾಟ ಸಾಕಷ್ಟು ರೋಚಕತೆ ಸೃಷ್ಟಿಸಿದೆ.
ಭಾರತ ತಂಡ:
ಸೂರ್ಯಕುಮಾರ್ ಯಾದವ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್ ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್, ದೀಪಕ್ ಚಹಾರ್.
ಆಸ್ಟ್ರೇಲಿಯಾ ತಂಡ:
ಮ್ಯಾಥ್ಯೂ ವೇಡ್ (ನಾಯಕ), ಜೇಸನ್ ಬೆಹ್ರೆನ್ಡಾರ್ಫ್, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ರಿಸ್ ಗ್ರೀನ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಬೆನ್ ಮೆಕ್ಡರ್ಮಾಟ್, ಜೋಶ್ ಫಿಲಿಪ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಕೇನ್ ರಿಚರ್ಡ್ಸನ್.