ಮುಂಬೈ: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ಡಿಸೆಂಬರ್ 26 ರಿಂದ ಶುರುವಾಗಲಿದೆ. ಎರಡು ಪಂದ್ಯಗಳ ಈ ಸರಣಿಯಿಂದ ಟೀಮ್ ಇಂಡಿಯಾದ ಯುವ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಹೊರಗುಳಿದಿದ್ದಾರೆ.
ಸೌತ್ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಕ್ಯಾಚ್ ಹಿಡಿಯುವ ಯತ್ನದಲ್ಲಿ ಅವರ ಬಲಗೈ ಬೆರಳಿಗೆ ಗಾಯವಾಗಿತ್ತು. ಈ ಗಾಯದಿಂದ ರುತುರಾಜ್ ಗಾಯಕ್ವಾಡ್ ಇನ್ನೂ ಕೂಡ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ.
ಇದೀಗ ಅವರ ಬದಲಿಗೆ ಪಶ್ಚಿಮ ಬಂಗಾಳದ ಬ್ಯಾಟರ್ ಅಭಿಮನ್ಯು ಈಶ್ವರನ್ಗೆ ಬುಲಾವ್ ನೀಡಲಾಗಿದೆ ಎಂದು ವರದಿಯಾಗಿದೆ. ಪ್ರಸ್ತುತ ಭಾರತ ಎ ತಂಡದಲ್ಲಿರುವ ಅಭಿಮನ್ಯು ಸೌತ್ ಆಫ್ರಿಕಾದಲ್ಲೇ ಇದ್ದು, ಹೀಗಾಗಿ ರುತುರಾಜ್ ಬದಲಿಗೆ ಅವರನ್ನೇ ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ.
ಇನ್ನು ಅಭಿಮನ್ಯು ಈಶ್ವರನ್ ಈ ಹಿಂದೆಯೂ ಟೀಮ್ ಇಂಡಿಯಾ ಟೆಸ್ಟ್ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಅವರಿಗೆ ಭಾರತ ತಂಡದ ಪಾದಾರ್ಪಣೆ ಮಾಡುವ ಅವಕಾಶ ದೊರೆತಿರಲಿಲ್ಲ. ಇದೀಗ ವರ್ಷಗಳ ಬಳಿಕ ಮತ್ತೆ ತಂಡದಲ್ಲಿ ಚಾನ್ಸ್ ಸಿಕ್ಕಿದೆ. ಇದನ್ನು ಹೇಗೆ ನಿಭಾಯಿಸಲಿದ್ದಾರೆ ಎಂಬುದನ್ನ ಕಾದುನೋಡಬೇಕಿದೆ.
ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…
ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…
ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…
ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.
ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.