ಮುಂಬೈ: ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ಹಂಗಾಮಿ ನಾಯಕ ಕುಸಾಲ್ ಮೆಂಡಿಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಏಕದಿನ ವಿಶ್ವಕಪ್ನ 33ನೇ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ಹಂಗಾಮಿ ನಾಯಕ ಕುಸಾಲ್ ಮೆಂಡಿಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಏಕದಿನ ಕ್ರಿಕೆಟ್ನಲ್ಲಿ ಉಭಯ ತಂಡಗಳು ಇದುವರೆಗೆ 167 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡ 98 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ, ಶ್ರೀಲಂಕಾ ಗೆದ್ದಿರುವುದು 57 ಪಂದ್ಯಗಳನ್ನು ಮಾತ್ರ. ಇನ್ನು 11 ಪಂದ್ಯಗಳು ಕಾರಣಾಂತರಗಳಿಂದ ರದ್ದಾದರೆ, ಒಂದು ಮ್ಯಾಚ್ ಟೈನಲ್ಲಿ ಅಂತ್ಯ ಕಂಡಿತ್ತು.
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಶ್ರೀಲಂಕಾ (ಪ್ಲೇಯಿಂಗ್ XI): ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್ (ನಾಯಕ), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಏಂಜೆಲೊ ಮ್ಯಾಥ್ಯೂಸ್, ದುಶನ್ ಹೇಮಂತ, ಮಹೀಶ್ ತೀಕ್ಷಣ, ಕಸುನ್ ರಜಿತ, ದುಷ್ಮಂತ ಚಮೀರ, ದಿಲ್ಶನ್ ಮಧುಶಂಕ.