ಶ್ರೀಲಂಕಾ: ಇಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯುತ್ತಿರುವ ಎಸಿಸಿ ಉದಯೋನ್ಮುಖ ತಂಡಗಳ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಪಾಕಿಸ್ತಾನ ಎ ತಂಡವನ್ನು ಎದುರಿಸುತ್ತಿರುವ ಯಶ್ ಧುಲ್ ನಾಯಕತ್ವದ ಭಾರತ ಎ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.
ಈ ಪಂದ್ಯಾವಳಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿಯಾಗಿದ್ದು, ಲೀಗ್ ಹಂತದಲ್ಲಿ ಪಾಕ್ ತಂಡವನ್ನು ಎದುರಿಸಿದ್ದ ಭಾರತ ತಂಡ ಸಾಂಪ್ರದಾಯಿಕ ಎದುರಾಳಿಯನ್ನು 8 ವಿಕೆಟ್ಗಳಿಂದ ಹೀನಾಯವಾಗಿ ಸೋಲಿಸಿತ್ತು. ಇದೀಗ ಪ್ರಶಸ್ತಿಗಾಗಿ ಉಭಯ ತಂಡಗಳು ಎರಡನೇಬಾರಿಗೆ ಕಣಕ್ಕಿಳಿಯುತ್ತಿದ್ದು, ಉಭಯರಿಗೂ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಪಂದ್ಯದ ಟಾಸ್ ಮುಗಿಯುವುದರೊಂದಿಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.