ಮುಂಬರುವ ಏಷ್ಯಾಕಪ್ಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 17 ಸದಸ್ಯರ ಈ ತಂಡದಲ್ಲಿ ಕೆಲ ಸ್ಟಾರ್ ಆಟಗಾರರು ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಅದರಲ್ಲೂ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹಾಗೂ ಯುಜ್ವೇಂದ್ರ ಚಹಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ.
ದೆಹಲಿಯಲ್ಲಿ ಅಜಿತ್ ಅಗರ್ಕರ್ ನೇತೃತ್ವದಲ್ಲಿ ಭಾರತೀಯ ಆಯ್ಕೆಗಾರರ ಸಭೆ ನಡೆದಿದ್ದು, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಜೊತೆಗೆ ನಾಯಕ ರೋಹಿತ್ ಶರ್ಮಾ ಕೂಡ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗಿಯಾಗಿದ್ದರು.
17 ಸದಸ್ಯರ ತಂಡದಲ್ಲಿ ಪರಿಪೂರ್ಣ ಸ್ಪಿನ್ನರ್ ಆಗಿ ಸ್ಥಾನ ಪಡೆದಿರುವುದು ಕುಲ್ದೀಪ್ ಯಾದವ್ ಮಾತ್ರ. ಇನ್ನು ಸ್ಪಿನ್ ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ. ಇದರ ಜೊತೆಗೆ ಕೆ.ಎಲ್ ರಾಹುಲ್ ಕಂಬ್ಯಾಕ್ ಮಾಡಿದ್ದಾರೆ.
ಏಷ್ಯಾಕಪ್ಗೆ ಆಯ್ಕೆಯಾದ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).
ಏಷ್ಯಾ ಕಪ್ 2023 ಆಗಸ್ಟ್ 30 ರಿಂದ ಸೆಪ್ಟೆಂಬರ್ 17ರ ವರೆಗೆ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ತಂಡಗಳು ಭಾಗವಹಿಸುತ್ತಿವೆ.