ಬೆಂಗಳೂರು: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಐದನೇ ಹಾಗೂ ಅಂತಿಮ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಸರಣಿಯಲ್ಲಿ ಟೀಂ ಇಂಡಿಯಾ 3-1 ಮುನ್ನಡೆ ಸಾಧಿಸಿದ್ದು, ಈಗಾಗಲೇ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇದೀಗ 4-1 ಅಂತರದಲ್ಲಿ ಕಾಂಗರೂಗಳನ್ನು ಮಣಿಸಲು ಟೀಂ ಇಂಡಿಯಾ ಕಠಿಣ ಪ್ರಯತ್ನ ನಡೆಸಲಿದೆ. ಇತ್ತ 2-3 ಅಂತರದಿಂದ ಸರಣಿ ಸೋತ ಸಮಾಧಾನದೊಂದಿಗೆ ತವರಿಗೆ ಮರಳುವ ಪ್ರಯತ್ನವನ್ನು ಆಸ್ಟ್ರೇಲಿಯಾ ಮಾಡಲಿದೆ.
ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಮ್ಯಾಥ್ಯೂ ವೇಡ್ ಮೊದಲು ಫೀಲ್ಡಿಂಗ್ ನಿರ್ಧಾರ ಕೈಗೊಂಡಿದ್ದಾರೆ. ಹೀಗಾಗಿ ಕಳೆದ ಪಂದ್ಯಗಳಂತೆ ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ.
ಭಾರತ ತಂಡ: ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅವೇಶ್ ಖಾನ್, ಮುಖೇಶ್ ಕುಮಾರ್, ಅರ್ಶ್ದೀಪ್ ಸಿಂಗ್.
ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಜೋಶ್ ಫಿಲಿಪ್, ಬೆನ್ ಮೆಕ್ಡರ್ಮಾಟ್, ಆರನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ವೇಡ್ (ನಾಯಕ), ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆನ್ಡಾರ್ಫ್, ತನ್ವೀರ್ ಸಂಘ.