ಮುಂಬೈ: ಐಪಿಎಲ್ 2024ರ ಮೊದಲ ಸುತ್ತಿನ ಪಂದ್ಯಗಳು ಮುಗಿದಿವೆ. ಇದೀಗ ದ್ವಿತೀಯಾರ್ಧದ ಪಂದ್ಯಗಳು ನಡೆಯುತ್ತಿದ್ದು, 2ನೇ ಸುತ್ತಿನಲ್ಲೂ ಭರ್ಜರಿ ಪ್ರದರ್ಶನ ಮುಂದುವರೆಸುವ ಮೂಲಕ ರಾಜಸ್ಥಾನ್ ರಾಯಲ್ಸ್ ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನ ಅಲಂಕರಿಸಿದೆ.
ರಾಜಸ್ಥಾನ್ ರಾಯಲ್ಸ್ ಇದುವರೆಗೆ 8 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 14 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.698.
8 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 10 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +0.972 ನೆಟ್ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
ಸನ್ರೈಸರ್ಸ್ ಹೈದರಾಬಾದ್ ತಂಡವು 8 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, ಇದೀಗ 10 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್ಆರ್ಹೆಚ್ ತಂಡದ ನೆಟ್ ರನ್ ರೇಟ್ +0.577.
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಆಡಿರುವ 8 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಎಲ್ಎಸ್ಜಿ ಒಟ್ಟು 10 ಅಂಕಗಳೊಂದಿಗೆ +0.148 ನೆಟ್ ರನ್ ರೇಟ್ ಹೊಂದಿದೆ.
8 ಪಂದ್ಯಗಳಲ್ಲಿ 4 ಜಯ ಹಾಗೂ 4 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 5ನೇ ಸ್ಥಾನದಲ್ಲಿದೆ. ಒಟ್ಟು 8 ಅಂಕ ಹೊಂದಿರುವ ಸಿಎಸ್ಕೆ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.415.
9 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.386 ನೆಟ್ ರನ್ ರೇಟ್ನೊಂದಿಗೆ 8 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
9 ಮ್ಯಾಚ್ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 6 ಅಂಕಗಳನ್ನು ಹೊಂದಿದ್ದು, ಈ ಮೂಲಕ 7ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.974.
ಪಂಜಾಬ್ ಕಿಂಗ್ಸ್ ತಂಡವು 8ನೇ ಸ್ಥಾನದಲ್ಲಿದ್ದು, ಆಡಿರುವ 9 ಪಂದ್ಯಗಳಲ್ಲಿ 3 ಗೆಲುವು ಸಾಧಿಸಿ 6 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.187.
ಎಂಟು ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ -0.227.
ಆರ್ಸಿಬಿ ತಂಡವು ಇದುವರೆಗೆ 9 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್ನಲ್ಲಿ ಸೋತಿದೆ. ಈ ಮೂಲಕ ಕೇವಲ 4 ಅಂಕ ಸಂಪಾದಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಅಲ್ಲದೆ ಆರ್ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.721.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…