ಮುಂಬೈ: ಟೀಮ್ ಇಂಡಿಯಾದ ಹೆಡ್ ಕೋಚ್ ರಾಹುಲ್ ದ್ರಾವಿಡ್, ಸೆಲೆಕ್ಷನ್ ಕಮಿಟಿ ಮುಖ್ಯಸ್ಥ ಅಜಿತ್ ಅಗರ್ಕರ್ ಮಾತಿಗೂ ಕ್ಯಾರೇ ಎನ್ನದೆ ರಣಜಿ ಕ್ರಿಕೆಟ್ ಆಡಲು ಹಿಂದೇಟು ಹಾಕುತ್ತಿದ್ದ ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ಗೆ ಬಿಸಿಸಿಐ ಬಿಗ್ ಶಾಕ್ ಕೊಟ್ಟಿದೆ.
ಉದ್ದೇಪೂರ್ವಕವಾಗಿ 2024ರ ರಣಜಿ ಟ್ರೋಫಿ ಪಂದ್ಯಗಳನ್ನು ಆಡದ ಕಾರಣ ಟೀಮ್ ಇಂಡಿಯಾದ ಯುವ ಬ್ಯಾಟರ್ ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್ ಕಳೆದುಕೊಳ್ಳುವ ಅಪಾಯ ಎದುರಿಸುತ್ತಿದ್ದಾರೆ.
ಹೌದು, ಬಿಸಿಸಿಐ ಶ್ರೇಯಸ್ ಅಯ್ಯರ್ ಅವರನ್ನು ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ 3 ಕೋಟಿ ರೂ. ನೀಡುವ ಬಿ ಗ್ರೇಡ್ ಒಪ್ಪಂದಕ್ಕೆ ಸೇರಿಸಿಕೊಂಡಿತ್ತು. ಇಶನ್ ಕಿಶನ್ ಕೂಡ ವಾರ್ಷಿಕ 1 ಕೋಟಿ ರೂ. ಗಳಿಸೋ C ಗ್ರೇಡ್ಗೆ ಸೇರ್ಪಡೆಯಾಗಿದ್ದರು.
ಈಗದ ಮಾಹಿತಿ ಪ್ರಕಾರ ಬಿಸಿಸಿಐ ಸದ್ಯದಲ್ಲೇ ಆಟಗಾರರಿಗೆ ಹೊಸ ಸೆಂಟ್ರಲ್ ಕಾಂಟ್ರ್ಯಾಕ್ಟ್ ಅನೌನ್ಸ್ ಮಾಡಲಿದೆ. ಹೀಗಾಗಿ ರಣಜಿ ಕ್ರಿಕೆಟ್ ಆಡದ ಕಾರಣ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಬಿಸಿಸಿಐ ಕೇಂದ್ರ ಒಪ್ಪಂದ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ ಎನ್ನಲಾಗಿದೆ.