ಕಪಿಲ್ ದೇವ್ ನಾಯಕತ್ವದ ಭಾರತ ತಂಡ ಚೊಚ್ಚಲ ವಿಶ್ವಕಪ್ ಮುಡಿಗೇರಿಸಿಕೊಂಡು ಇಂದಿಗೆ 40 ವರ್ಷಗಳು ಪೂರ್ಣಗೊಂಡಿವೆ. 1983ರಲ್ಲಿ ಇದೇ ದಿನದಂದು ಲಂಡನ್ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಬಲಿಷ್ಠ ವೆಸ್ಟ್ ಇಂಡೀಸ್ ವಿರುದ್ಧ 43 ರನ್ಗಳಿಂದ ಗೆಲುವು ಪಡೆದಿದ್ದ ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿತ್ತು.
1983ರಲ್ಲಿ ಏಕದಿನ ವಿಶ್ವಕಪ್ ಗೆಲ್ಲುವುದಕ್ಕೂ ಮುನ್ನ ಭಾರತ ತಂಡ, 1975 ಹಾಗೂ 1979ರ ವಿಶ್ವಕಪ್ ಟೂರ್ನಿಗಳಲ್ಲಿ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಗೆಲುವಿನ ನಗೆ ಬೀರಿತ್ತು. ಆದರೆ, ಎರಡು ಬಾರಿ ವಿಶ್ವಕಪ್ ವಿಜೇತ ವೆಸ್ಟ್ ಇಂಡೀಸ್ ತಂಡವನ್ನು 1983ರ ವಿಶ್ವಕಪ್ ಫೈನಲ್ ಹಣಾಹಣಿಯಲ್ಲಿ ಮಣಿಸಿ ಭಾರತ ಚೊಚ್ಚಲ ವಿಶ್ವಕಪ್ ಮುಡಿಗೇರಿಸಿಕೊಂಡಿದ್ದು ವಿಶೇಷ.
ಕಪಿಲ್ ದೇವ್ ನಾಯಕತ್ವದ ಭಾರತ ಚೊಚ್ಚಲ ವಿಶ್ವಕಪ್ ಮುಡಿಗೇರಿಸಿಕೊಂಡ ಬಳಿಕ, ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಟೀಮ್ ಇಂಡಿಯಾ ಎರಡನೇ ಬಾರಿ 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ನಂತರ 2015 ಹಾಗೂ 2019 ಓಡಿಐ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಸೆಮಿಫೈನಲ್ ಹಂತದಲ್ಲಿ ಸೋಲು ಅನುಭವಿಸಿತ್ತು.
ಲಂಡನ್ನ ಇತಿಹಾಸ ಪ್ರಸಿದ್ಧ ಲಾರ್ಡ್ಸ್ ಅಂಗಳದಲ್ಲಿ ನಡೆದಿದ್ದ ವಿಶ್ವಕಪ್ ಫೈನಲ್ ಹಣಾಹಣಿಯಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡ 54.4 ಓವರ್ಗಳಿಗೆ 183 ರನ್ ಗಳಿಸಿತ್ತು. ನಂತರ, ಗುರಿ ಹಿಂಬಾಲಿಸಿದ ಕ್ಲೈವ್ ಲಾಯ್ಡ್ ನಾಯಕತ್ವದ ವೆಸ್ಟ್ ಇಂಡೀಸ್, ಮದನ್ ಲಾಲ್ ಹಾಗೂ ಮಹೀಂದರ್ ಅಮರ್ನಾಥ್ ಅವರ ಮಾರಕ ದಾಳಿಗೆ ನಲುಗಿ 140 ರನ್ಗಳಿಗೆ ಆಲೌಟ್ ಆಗಿತ್ತು. ಆ ಮೂಲಕ 43 ರನ್ಗಳೊಂದಿಗೆ ಗೆಲುವು ಸಾಧಿಸಿದ ಭಾರತ ತಂಡ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಚೊಚ್ಚಲ ವಿಶ್ವಕಪ್ ಎತ್ತಿ ಹಿಡಿದು ಸಂಭ್ರಮಿಸಿತ್ತು.
ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…
17ನೇ ಆವೃತ್ತಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ತಂಡಗಳು ಈ…
ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್ಸ್ಕಿನ್ ಇರುವವರೂ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…