ಚೆನ್ನೈ: ಕಳೆದ ದಿನ ಚೆನ್ನೈನಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಿದ್ದವು. ಈ ವೇಳೆ ಸಿಎಸ್ಕೆ ತಂಡದ ಎಂಎಸ್ ಧೋನಿ ಅಭಿಮಾನಿಗಳಿಗೆ ರವೀಂದ್ರ ಜಡೇಜಾ ಚಮಕ್ ಕೊಟ್ಟ ಪ್ರಸಂಗ ನಡೆಯಿತು.
ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡ್ತಿದ್ದ ಸಿಎಸ್ಕೆ ತಂಡವು 16.5ನೇ ಓವರ್ನಲ್ಲಿ ಶಿವಂ ದುಬೆ ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಮೂರು ವಿಕೆಟ್ ಕಳೆದುಕೊಂಡು 135 ರನ್ಗಳಿಸಿತ್ತು. ಸಿಎಸ್ಕೆಗೆ ಗೆಲ್ಲಲು ಕೇವಲ ಮೂರು ರನ್ಗಳ ಅಗತ್ಯ ಇತ್ತು. ದುಬೆ ವಿಕೆಟ್ ಬಿದ್ದ ಬಳಿಕ ಕ್ರೀಸ್ಗೆ ಯಾರು ಬರುತ್ತಾರೆ ಎಂಬ ನಿರೀಕ್ಷೆ ಹೆಚ್ಚಾಗಿತ್ತು.
ಈ ವೇಳೆ ರವಿಂದ್ರ ಜಡೇಜಾ, ಡ್ರೆಸ್ಸಿಂಗ್ ರೂಮ್ನಿಂದ ಬ್ಯಾಟಿಂಗ್ ಬಂದಂತೆ ಮೈದಾನದತ್ತ ಬರುತ್ತಾರೆ. ಆಗ ಧೋನಿ ಅಭಿಮಾನಿಗಳು, ತಲಾ, ಧೋನಿ ಎಂದು ಜೋರಾಗಿ ಕೂಗುತ್ತಾರೆ. ನಂತರ ಜಡೇಜಾ, ನಗಾಡುತ್ತ ವಾಪಸ್ ಡ್ರೆಸ್ಸಿಂಗ್ ರೂಮ್ಗೆ ಹೋಗುತ್ತಾರೆ. ಆಗ ಧೋನಿ ಮೈದಾನಕ್ಕೆ ಬರುತ್ತಾರೆ. ಅಭಿಮಾನಿಗಳ ಝೈಂಕಾರ ಜೋರಾಗಿತ್ತು. ಜಡೇಜಾ, ಚಪಾಕ್ನಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಚಮಕ್ ನೀಡಿರೋದು ಇದೀಗ ವೈರಲ್ ಆಗಿದೆ. ಇನ್ನು ಧೋನಿ ವಿನ್ನಿಂಗ್ ರನ್ ಬಾರಿಸಿದರು. ಇದನ್ನು ನೋಡಿ ಫ್ಯಾನ್ಸ್ ಸಕತ್ ಖುಷಿಪಟ್ಟಿದ್ದಾರೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.