ಮುಂಬೈ: 2023ರ ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಫೈನಲ್ಗೆ ಹೋಗಲು ಪ್ರಮುಖ ಕಾರಣ ಸ್ಟಾರ್ ವೇಗಿ ಮೊಹಮ್ಮದ್ ಶಮಿ. ಇತ್ತೀಚೆಗೆ ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೊಹಮ್ಮದ್ ಶಮಿ ಅಯೋಧ್ಯೆ ರಾಮ ಮಂದಿರದ ಕುರಿತು ಮಾತಾಡಿದ್ದಾರೆ.
ವಿಶ್ವಕಪ್ ಪಂದ್ಯವೊಂದರಲ್ಲಿ ಶಮಿ ಪೆವಿಲಿಯನ್ಗೆ ತೆರಳುವಾಗ ಅಭಿಮಾನಿಗಳು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಮಿ, ಜೈ ಶ್ರೀರಾಮ್ ಎಂದಿದ್ದರಲ್ಲಿ ತಪ್ಪೇನಿದೆ? ಎಂದಿದ್ದಾರೆ. ಈ ಹೇಳಿಕೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಕಳೆದ ವರ್ಷ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ರಜಿತ್ನನ್ನು ಔಟ್ ಮಾಡಿದ ಬಳಿಕ ಮೊಣಕಾಲೂರಿ ಕುಳಿತಿದ್ದೆ. ಇದಕ್ಕೆ ನಾನು ನಮಾಜ್ ಮಾಡಿದ್ದ ಎಂದು ಟೀಕೆ ಮಾಡಲಾಯ್ತು. ನನ್ನ ಬೌಲಿಂಗ್ ಬಗ್ಗೆ ಮಾತಾಡೋದು ಬಿಟ್ಟು ನಮಾಜ್ ವಿವಾದವನ್ನೇ ಹೈಲೆಟ್ ಮಾಡಲಾಗುತ್ತಿದೆ. ನಾನು ಸತತ ಐದು ಓವರ್ ಬೌಲ್ ಮಾಡಿ ಸುಸ್ತಾಗಿದ್ದೆ. ಹೀಗಾಗಿ ಮೊಣಕಾಲೂರಿ ಕುಳಿತೆ ಅಷ್ಟೆ. ನಾನು ಯಾವತ್ತೂ ಮೈದಾನದಲ್ಲಿ ನಮಾಜ್ ಮಾಡಲ್ಲ ಎಂದರು.
ನಾನು ಮುಸ್ಲಿಂ. ನಾನು ಭಾರತೀಯ. ನನ್ನ ದೇಶ ನನ್ನ ಮೊದಲ ಆದ್ಯತೆ. ಪ್ರತಿ ಧರ್ಮದಲ್ಲೂ ಬೇರೆ ಧರ್ಮವನ್ನು ಇಷ್ಟಪಡದ ಐದಾರು ಜನ ಇರುತ್ತಾರೆ. ಅದಕ್ಕೆ ನನ್ನ ಅಭ್ಯಂತರವಿಲ್ಲ. ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಿರುವಾಗ ಜೈ ಶ್ರೀರಾಮ್ ಹೇಳುವುದರಲ್ಲಿ ತಪ್ಪೇನು? ಸಾವಿರ ಸಲ ಹೇಳಲಿ. ನಾನು ಅಲ್ಲಾಹು ಅಕ್ಬರ್ ಎಂದರೆ ತಪ್ಪೇನು? ಒಬ್ಬ ಮುಸ್ಲಿಂ ಅದರಲ್ಲೂ ಒಬ್ಬ ಭಾರತೀಯನಾಗಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದರು. ಈ ಮಾತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ.
ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…
ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…
ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…
ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…