ಕಲಬುರಗಿ: ಮೈಸೂರಿನಲ್ಲಿ ನಡೆದ ದಸರಾ ರಾಜ್ಯಮಟ್ಟದ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳಲ್ಲಿ ಕಲಬುರಗಿ ಜಿಲ್ಲೆಯ ಕ್ರೀಡಾಪಟುಗಳು ಎರಡು ಬೆಳ್ಳಿ ಹಾಗೂ ನಾಲ್ಕು ಕಂಚಿನ ಪದಕ ಸಾಧನೆ ಮಾಡಿದ್ದಾರೆ. ಚಿಂಚೋಳಿ ತಾಲ್ಲೂಕಿನ ಕೊಡ್ಲಿ ತಾಂಡದ ಸಂಗೀತಾ ಪಾಂಡು ಟೇಕ್ವಾಂಡೊ ಸ್ಪರ್ಧೆಯ 55 ಕೆ.ಜಿ ವಿಭಾಗದಲ್ಲಿ 2ನೇ ಸ್ಥಾನದೊಂದಿಗೆ ಬೆಳ್ಳಿ ಪದಕ ಜಯಿಸಿದ್ದಾರೆ.
ಮಹಿಳೆಯರ ಜೂಡೊ ಸ್ಪರ್ಧೆಯ 48 ಕೆ.ಜಿ ವಿಭಾಗದಲ್ಲಿ ಶ್ರೀಲೇಖಾ ದ್ವಿತೀಯ ಸ್ಥಾನದೊಂದಿಗೆ ರಜತ ಪದಕ ಗೆದ್ದಿದ್ದಾರೆ.
ಪುರುಷರ ಜೂಡೊ ಸ್ಪರ್ಧೆಯ 81 ಕೆ.ಜಿ ವಿಭಾಗದಲ್ಲಿ ಸುರೇಂದ್ರ ಸಿಂಗ್ 3ನೇ ಸ್ಥಾನದೊಂದಿಗೆ ಕಂಚಿನ ಪದಕ ಗೆದ್ದಿದ್ದಾರೆ. ಜೇವರ್ಗಿ ತಾಲ್ಲೂಕಿನ ಬಸವರಾಜ ಆರ್. ಮೇಲಿನಮಠ ವೇಟ್ಲಿಫ್ಟಿಂಗ್ನಲ್ಲಿ ತೃತೀಯ ಸ್ಥಾನದೊಂದಿಗೆ ಕಂಚು ಗೆದ್ದಿದ್ದಾರೆ.
ಕುಸ್ತಿ ಸ್ಪರ್ಧೆಯ 70 ಕೆ.ಜಿ ವಿಭಾಗದಲ್ಲಿ ಅಫಜಲಪುರ ತಾಲ್ಲೂಕಿನ ಸಂತೋಷ ಹೊನ್ನಪ್ಪ ದೇಸಾಯಿ ಮೂರನೇ ಸ್ಥಾನದೊಂದಿಗೆ ಕಂಚಿನ ಪದಕ ಜಯಿಸಿದ್ದಾರೆ.
ಈಜು ಸ್ಪರ್ಧೆಯ ಮಹಿಳಾ ವಿಭಾಗದಲ್ಲಿ ಕಲಬುರಗಿ ಈಜುಪಟು ಶೈಲಜಾ ಗೋಪಾಲರಾವ್ 4×100 ಫ್ರೀ ಸ್ಟೈಲ್ ರಿಲೇ ಸ್ಪರ್ಧೆಯಲ್ಲಿ ಕಂಚು ಗೆದ್ದಿದ್ದಾರೆ. ಶೈಲಜಾ ಅವರು ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿರುವ ಈಜುಕೊಳದಲ್ಲಿ ಅಭ್ಯಾಸ ಮಾಡುತ್ತಾರೆ.
ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ