ಐದು ಪಂದ್ಯಗಳ ಏಕದಿನ ಸರಣಿಗಾಗಿ ನಮೀಬಿಯಾ ಪ್ರವಾಸ ಮಾಡಿರುವ ಕರ್ನಾಟಕ ಕ್ರಿಕೆಟ್ ತಂಡ ವಿಂಡ್ಹೋಕ್ನ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ 4ನೇ ಏಕದಿನ ಪಂದ್ಯವನ್ನು 5 ವಿಕೆಟ್ಗಳಿಂದ ಗೆದ್ದು ಏಕದಿನ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಂಡಿದೆ.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆತಿಥೇಯ ನಮೀಬಿಯಾ ತಂಡ ನಿಗದಿತ 50 ಓವರ್ಗಳಲ್ಲಿ ಏಳು ವಿಕೆಟ್ಗಳ ನಷ್ಟಕ್ಕೆ 254 ರನ್ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಕರ್ನಾಟಕ ತಂಡ ಇನ್ನು 17 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್ಗಳಿಂದ ಗೆದ್ದು ಬೀಗಿತು.
254 ರನ್ಗಳ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ 46.1 ಓವರ್ಗಳಲ್ಲಿ 256 ರನ್ ಬಾರಿಸುವುದರೊಂದಿಗೆ ಸುಲಭ ಜಯ ಸಾಧಿಸಿತು. ತಂಡದ ಪರ ಆರಂಭಿಕ ಎಲ್ಆರ್ ಚೇತನ್ 58 ಎಸೆತಗಳಲ್ಲಿ 47 ರನ್ ಸಿಡಿಸಿದರೆ, ನಿಖಿನ್ ಜೋಶಿ 56 ರನ್ ಗಳಿಸಿ ರನೌಟ್ ಆದರು.
ಇನ್ನು ಸಿದ್ಧಾರ್ಥ್ 26 ರನ್ಗಳ ಇನ್ನಿಂಗ್ಸ್ ಆಡಿದರೆ, ಕೃತಿಕ್ ಕೃಷ್ಣ 32 ರನ್ ಬಾರಿಸಿದರು. ರವಿಕುಮಾರ್ ಸಮರ್ಥ್ 56 ರನ್ ಮತ್ತು ಶುಭಾಂಗ್ ಹೆಗ್ಡೆ ಅಜೇಯ 30 ರನ್ ಬಾರಿಸುವುದರೊಂದಿಗೆ ತಂಡಕ್ಕೆ ಸುಲಭ ಜಯ ತಂದುಕೊಟ್ಟರು.
ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…
ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…
ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…
ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…
ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…
ಸೋದರಿಯ ಮದುವೆ ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಸಹೋದರಿಗೆ ಹೃದಯಾಘಾತ ಸಂಭವಿಸಿದ ಘಟನೆ ಮೀರತ್ನಲ್ಲಿ ನಡೆದಿದೆ. ರಿಂಷಾ (18)…