ಕ್ರಿಕೆಟಿಗ ಕೆ.ಎಲ್ ರಾಹುಲ್ ಅವರು ಶ್ರೀ ಕ್ಷೇತ್ರ ಸೌತಡ್ಕ ಗಣಪನ ದೇವಸ್ಥಾನಕ್ಕೆ ಭೇಟಿ ಕೊಟ್ಟು ನಿನ್ನೆ (ಜ. 17) ರಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಟೀಂ ಇಂಡಿಯಾದಲ್ಲಿ ಉತ್ತಮ ಫಾರ್ಮ್ನಲ್ಲಿರುವ ಕೆ.ಎಲ್ ರಾಹುಲ್ ಮುಂದಿನ ತಮ್ಮ ಜರ್ನಿ ಉಜ್ವಲವಾಗಿರಲೆಂದು ದೇವರ ಮೊರೆ ಹೋಗಿದ್ದಾರೆ. ನಿನ್ನೆ ಕೊಲ್ಲೂರು ಮುಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದರು. ಇದಾದ ಬಳಿಕ ಧರ್ಮಸ್ಥಳ ಸಮೀಪ ಇರುವ ಸೌತಡ್ಕ ದೇಗುಲಕ್ಕೂ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆಎಂದು ಮಾಹಿತಿ ಲಭಿಸಿದೆ.