ಮುಂಬೈ: ಭಾರತದ ಆಟಗಾರ ಕೆ.ಎಲ್. ರಾಹುಲ್ ಅವರಿಗೆ ಕೋವಿಡ್ ಇರುವುದು ಖಚಿತವಾಗಿದೆ. ಇದರಿಂದಾಗಿ ಅವರು ಮುಂಬರಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ.
ಗುರುವಾರ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸಭೆಯ ನಂತರ ಅಧ್ಯಕ್ಷ ಸೌರವ್ ಗಂಗೂಲಿ ಈ ವಿಷಯ ತಿಳಿಸಿದರು. ರಾಹುಲ್ ಈಚೆಗಷ್ಟೇ ಜರ್ಮನಿಯಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಅವರು ಪುನಶ್ಚೇತನ ಮತ್ತು ಆರೈಕೆ ಪಡೆಯುತ್ತಿದ್ದರು. ಅದರಿಂದಾಗಿ ಶುಕ್ರವಾರ ವೆಸ್ಟ್ ಇಂಡೀಸ್ನಲ್ಲಿ ಆರಂಭವಾಗಲಿರುವ ಏಕದಿನ ಸರಣಿಯಲ್ಲಿ ಆಡದಿರಲು ನಿರ್ಧರಿಸಿದ್ದರು.
ಗುರುವಾರ ರಾಹುಲ್, ಎನ್ಸಿಎನಲ್ಲಿ ಲೆವಲ್ ತ್ರಿ ಕೋಚ್ ಸರ್ಟಿಫಿಕೇಷನ್ ಕೋರ್ಸ್ ಅಭ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದರು.