News Karnataka Kannada
Saturday, May 04 2024
ಕ್ರೀಡೆ

ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಚೇತರಿಕೆ; ಅನಾರೋಗ್ಯದ ಕಾರಣ ಪಂದ್ಯದಿಂದ ಹೊರಗೆ

ವಿಷಕಾರಿ ದ್ರವ ಸೇವನೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಯಾಂಕ್ ಅಗರ್ವಾಲ್ ಫೆ.೨ರಿಂದ ಶುರುವಾಗಲಿರುವ ರೈಲ್ವೇಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ. ಪಂದ್ಯದಲ್ಲಿ ಕರ್ನಾಟಕದ ತಂಡವನ್ನು ಯುವ ಆಟಗಾರ ನಿಕಿನ್ ಜೋಸ್ ಮುನ್ನಡೆಸುವ ಸಾಧ್ಯತೆಯಿದೆ.
Photo Credit : News Kannada

ಗುಜರಾತ್: ವಿಷಕಾರಿ ದ್ರವ ಸೇವನೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಯಾಂಕ್ ಅಗರ್ವಾಲ್ ಫೆ.೨ರಿಂದ ಶುರುವಾಗಲಿರುವ ರೈಲ್ವೇಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ. ಪಂದ್ಯದಲ್ಲಿ ಕರ್ನಾಟಕದ ತಂಡವನ್ನು ಯುವ ಆಟಗಾರ ನಿಕಿನ್ ಜೋಸ್ ಮುನ್ನಡೆಸುವ ಸಾಧ್ಯತೆಯಿದೆ.

ತ್ರಿಪುರ ವಿರುದ್ಧದ ರಣಜಿ ಪಂದ್ಯದ ಬಳಿಕ ಕರ್ನಾಟಕ ತಂಡ ಸೂರತ್ ಗೆ ತೆರಳಲು ಇಂಡಿಗೋ ವಿಮಾನವೇರಿತ್ತು. ಈ ವೇಳೆ ವಿಮಾನದಲ್ಲಿದ್ದ ದ್ರವವನ್ನು ನೀರೆಂದು ಭಾವಿಸಿ ಸೇವಿಸಿದ ಮಯಾಂಕ್ ರ ಗಂಟಲಲ್ಲಿ ಉರಿ ಕಾಣಿಸಿಕೊಂಡಿದ್ದು, ಅವರನ್ನು ಕೂಡಲೇ ಎಎಲ್​ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅವರ ಬಾಯಲ್ಲಿ ಊತ ಹಾಗೂ ಸುಟ್ಟು ಗಾಯಗಳು ಕಂಡು ಬಂದಿದೆ ಎಂದು ವರದಿಯಾಗಿದ್ದು, ಮುಂದಿನ 48 ಗಂಟೆಗಳ ಕಾಲ ಅವರಿಗೆ ಮಾತನಾಡಲು ಸಾಧ್ಯವಿಲ್ಲ ಎಂದು ತಿಳಿದು ಬಂದಿದೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆದ ಬಳಿಕ ಮಯಾಂಕ್ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಕರ್ನಾಟಕ ತಂಡದ ಮ್ಯಾನೇಜರ್ ರಮೇಶ್ ತಿಳಿಸಿದ್ದು, ಮುಂದಿನ ಪಂದ್ಯಗಳಲ್ಲಿ ಅವರು ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು