ನವದೆಹಲಿ: ಆಸ್ಟ್ರೇಲಿಯಾ ತಂಡವು ಆರನೇ ಬಾರಿಗೆ ಏಕದಿನ ವಿಶ್ವಕಪ್ ಪ್ರಶಸ್ತಿಯನ್ನ ಗೆದ್ದಿತ್ತು. ಈ ಪ್ರಶಸ್ತಿ ಗೆದ್ದ ಬಳಿಕ ಆಸ್ಟ್ರೇಲಿಯಾದ ಆಲ್ ರೌಂಡರ್ ಮಿಚೆಲ್ ಮಾರ್ಷ್ ಅವರು ಟ್ರೋಫಿ ಮೇಲೆ ಕಾಲಿಟ್ಟಿದ್ದ ಫೋಟೋ ವೈರಲ್ ಆಗತೊಡಗಿತ್ತು.
ಇದಾದ ಬಳಿಕ ಆಸ್ಟ್ರೇಲಿಯದ ಆಟಗಾರನಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಸದ್ಯ ಮಿಚೆಲ್ ಮಾರ್ಷ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಪ್ರಕರಣವನ್ನ ಆರ್ಟಿಐ ಕಾರ್ಯಕರ್ತರೊಬ್ಬರು ದಾಖಲಿಸಿದ್ದಾರೆ.
ಫೈನಲ್ ಪಂದ್ಯದಲ್ಲಿ ಭಾರತ ತಂಡದ ಸೋಲಿನ ನಂತರ ಭಾರತೀಯ ಅಭಿಮಾನಿಗಳು ತುಂಬಾ ದುಃಖಿತರಾಗಿದ್ದರು. ಇದೇ ವೇಳೆ ಮಿಚೆಲ್ ಮಾರ್ಷ್ ಈ ನಡುವಳಿಕೆ ಎಲ್ಲರನ್ನೂ ಕೆರಳಿಸಿತು. ಇದರಿಂದ ಕೋಪಗೊಂಡ ಪಂಡಿತ್ ಕೇಶವ್, ಅಲಿಗಢ ಯುಪಿ ಕಾರ್ಯಕರ್ತ ಮಾರ್ಷ್ ವಿರುದ್ಧ ದೂರು ದಾಖಲಿಸಿದ್ದಾರೆ. ಮಾರ್ಷ್ ವಿಶ್ವಕಪ್ ಟ್ರೋಫಿಗೆ ಕಾಲಿಡುವುದನ್ನ ಖಂಡಿಸಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.