ಮುಂಬೈ: ಐಪಿಎಲ್ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ನ ನಾಯಕ ಸ್ಥಾನದಿಂದ ಅನುಭವಿ ಆಟಗಾರ ಎಂಎಸ್ ಧೋನಿ ಕೆಳಗಿಳಿದಿದ್ದಾರೆ. ಅವರ ಬದಲಿಗೆ ರುತುರಾಜ್ ಗಾಯಕ್ವಾಡ್ ತಂಡದ ನಾಯಕರಾಗಿ ನೇಮಕವಾಗಿದ್ದಾರೆ.
‘2024 ರ ಟಾಟಾ ಐಪಿಎಲ್ ಆರಂಭಕ್ಕೂ ಮುನ್ನ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ರುತುರಾಜ್ ಗಾಯಕ್ವಾಡ್ಗೆ ಹಸ್ತಾಂತರಿಸಿದ್ದಾರೆ. ರುತುರಾಜ್ 2019 ರಿಂದ ಚೆನ್ನೈ ಸೂಪರ್ ಕಿಂಗ್ಸ್ನ ಅವಿಭಾಜ್ಯ ಅಂಗವಾಗಿದ್ದಾರೆ ಮತ್ತು ಈ ಅವಧಿಯಲ್ಲಿ ಐಪಿಎಲ್ನಲ್ಲಿ 52 ಪಂದ್ಯಗಳನ್ನು ಆಡಿದ್ದಾರೆ. ಮುಂಬರುವ ಋತುವಿನಲ್ಲಿ ಇವರ ನಾಯಕತ್ವದಲ್ಲಿ ಆಡುವುದನ್ನು ತಂಡ ಎದುರು ನೋಡುತ್ತಿದೆ’ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವದಿಂದ ಎಂಎಸ್ ಧೋನಿ ಕೆಳಗಿಳಿಯುತ್ತಿರುವುದು ಇದು 2ನೇ ಬಾರಿ. ಇದಕ್ಕೂ ಮುನ್ನ ತಂಡದ ನಾಯಕತ್ವದಿಂದ ಕೆಳಗಿಳಿದು ಈ ಸ್ಥಾನವನ್ನು ರವೀಂದ್ರ ಜಡೇಜಾಗೆ ನೀಡಿದ್ದರು. ಆದರೆ, ಆ ವರ್ಷದ ಐಪಿಎಲ್ನಲ್ಲಿ ತಂಡದ ದಯನೀಯ ಸೋಲುಗಳ ಕಾರಣದಿಂದಾಗಿ ಟೂರ್ನಿಯ ನಡುವೆಯೇ ಜಡೇಜಾ ನಾಯಕತ್ವವನ್ನು ಮರಳಿ ಎಂಎಸ್ ಧೋನಿಗೆ ನೀಡಿದ್ದರು. ಈಗ ಮತ್ತೊಮ್ಮೆ ಎಂಎಸ್ ಧೋನಿ ಮತ್ತೊಮ್ಮೆ ತಂಡದ ನಾಯಕತ್ವವನ್ನು ರುತುರಾಜ್ ಗೆ ಹಸ್ತಾಂತರ ಮಾಡಿದ್ದಾರೆ.
ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…
ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ…
ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…
ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ…
ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ.