Categories: ಕ್ರೀಡೆ

ರಣಜಿ ಟ್ರೋಫಿ: 42ನೇ ಬಾರಿ ರಣಜಿ ಟ್ರೋಫಿ ಗೆದ್ದ ಮುಂಬೈ

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಂಬೈ ತಂಡ ವಿದರ್ಭ ವಿರುದ್ಧ 169 ರನ್‌ಗಳ ಭರ್ಜರಿ ಗೆಲುವು ಸಾಧಿಸಿ ರಣಜಿ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದೆ.

42ನೇ ಬಾರಿ ರಣಜಿ ಟ್ರೋಫಿ ಗೆಲ್ಲುವ ಮೂಲಕ ಮುಂಬೈ ದಾಖಲೆಯನ್ನು ಉತ್ತಮ ಪಡಿಸಿದೆ. ಟಾಸ್ ಗೆದ್ದ ವಿದರ್ಭ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಮೊದಲ ಇನ್ನಿಂಗ್ಸ್‌ನಲ್ಲಿ 224 ರನ್‌ಗಳಿಗೆ ಆಲೌಟ್ ಆಯಿತು. ಪೃಥ್ವಿ ಶಾ 46 ರನ್ ಗಳಿಸಿದರೆ, ಶಾರ್ದೂಲ್ ಠಾಕೂರ್ 69 ಎಸೆತಗಳಲ್ಲಿ 75 ರನ್ ಗಳಿಸುವ ಮೂಲಕ ಮುಂಬೈ ತಂಡಕ್ಕೆ ಆಸರೆಯಾದರು. ಹರ್ಷ್ ದುಬೆ ಮತ್ತು ಯಶ್ ಠಾಕೂರ್ ತಲಾ ಮೂರು ವಿಕೆಟ್ ಪಡೆದರು.

ಮುಂಬೈ ತಂಡವನ್ನು ಕಡಿಮೆ ರನ್‌ಗಳಿಗೆ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ವಿದರ್ಭ ಕೇವಲ 105 ರನ್‌ಗಳಿಗೆ ಆಲೌಟ್ ಆಯಿತು. ನಾಯಕ ಅಜಿಂಕ್ಯ ರಹಾನೆ 73 ರನ್, ಶ್ರೇಯಸ್ ಅಯ್ಯರ್ 95 ರನ್ ಗಳಿಸಿದರೆ, ಶಂಸ್ ಮುಲಾನಿ 50 ರನ್‌ಗಳ ಉಪಯುಕ್ತ ಕಾಣಿಕೆ ನೀಡಿದರು.ಹೋರಾಡಿ ಸೋತ ವಿದರ್ಭಬೃಹತ್ ಮೊತ್ತದ ಗುರಿಯನ್ನು ಬೆನ್ನತ್ತಿದ ವಿದರ್ಭ ಗೆಲುವಿಗಾಗಿ ಹೋರಾಟ ನೀಡಿತು. ಕರುಣ್ ನಾಯರ್ 74 ರನ್ ಗಳಿಸಿದರೆ, ನಾಯಕ ಅಕ್ಷಯ್ ವಾಡ್ಕರ್ 102 ರನ್ ಗಳಿಸಿದರು, ಹರ್ಷ್ ದುಬೆ 65 ರನ್ ಗಳಿಸುವ ಮೂಲಕ ಮುಂಬೈ ಬೌಲರ್ ಗಳನ್ನು ಎದುರಿಸಿದರು. ಆದರೆ, ಅಂತಿಮವಾಗಿ ವಿದರ್ಭ ಎರಡನೇ ಇನ್ನಿಂಗ್ಸ್‌ನಲ್ಲಿ 368 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು.

Ashitha S

Recent Posts

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

5 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

20 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

40 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

1 hour ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

1 hour ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

2 hours ago