News Karnataka Kannada
Saturday, April 27 2024
ಕ್ರೀಡೆ

ಮೈಸೂರು: ಪತ್ರಕರ್ತರ ಸಂಘದ ಕ್ರೀಡಾಕೂಟಕ್ಕೆ ಚಾಲನೆ

Mysore Journalists' Association sports meet begins
Photo Credit : By Author

ಮೈಸೂರು: ಮೈಸೂರಿನ ಮಹಾರಾಜ ಕಾಲೇಜಿನ ಸ್ಪೋರ್ಟ್ಸ್ ಪೆವಿಲಿಯನ್ ಮೈದಾನದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಎರಡು ದಿನಗಳ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ದೊರಕಿತು.

ಕ್ರೀಡಾಕೂಟವನ್ನು ಬ್ಯಾಟ್ ಬೀಸುವ ಮೂಲಕ ಕೆ.ಆರ್. ಕ್ಷೇತ್ರದ ಶಾಸಕ ಶ್ರೀವತ್ಸ, ಜಿ.ಪಂ ಸಿಇಓ ಕೆ.ಎಂ. ಗಾಯತ್ರಿ, ಮುಡಾ ಆಯುಕ್ತ ದಿನೇಶ್, ಅಂತಾರಾಷ್ಟ್ರೀಯ ಖೋ ಖೋ ಆಟಗಾರ್ತಿ ವೀಣಾ ಚಾಲನೆ ನೀಡಿದರು.

ಬಳಿಕ‌ ಮಾತನಾಡಿದ ಜಿ.ಪಂ ಸಿಇಓ ಕೆ.ಎಂ. ಗಾಯಿತ್ರಿ ಹಿಂದಿನ ದಿನಗಳಲ್ಲಿ ಪತ್ರಿಕೆಯನ್ನು ಹೊರತರುವುದು ಎಂದರೆ ಸಾಮಾನ್ಯದ ಮಾತಲ್ಲ, ಅಂದು ತಡರಾತ್ರಿವರೆವಗೂ ಅಕ್ಷರಗಳನ್ನು ಜೋಡಿಸಿ ಮುದ್ರಣ ಮುಗಿದ ಬಳಿಕವಷ್ಟೆ ಮನೆಗೆ ತೆರಳುತ್ತಾರೆ, ಆ ವೇಳೆಗಾಗಲೇ ಮಧ್ಯರಾತ್ರಿಯೂ ಮೀರಿ ಹೋಗಿರುತ್ತದೆ. ಆದ್ದರಿಂದ ಇವರು ಕುಟುಂಬಕ್ಕೂ ಸಹ ಸಮಯ ನೀಡದ ಸ್ಥಿತಿ ಪತ್ರಕರ್ತನಿಗೆ ಬಂದೊದಗಿತ್ತು. ಪತ್ರಿಕಾ‌ ಒತ್ತಡ ಜೀವನದಲ್ಲಿ ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯಲು ಕ್ರೀಡಾಕೂಟ ಆಯೋಜಿಸಿರುವುದು ಸ್ವಾಗತಾರ್ಹ ಎಂದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಎಸ್.ಟಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಮಣ್ಯ, ನಗರ ಕಾರ್ಯದರ್ಶಿ ರಂಗಸ್ವಾಮಿ, ಉಪಾಧ್ಯಕ್ಷ ಎಂ.ಎಸ್. ಬಸವಣ್ಣ, ಖಜಾಂಚಿ ನಾಗೇಶ್ ಪಾಣತ್ತಲೆ, ರಾಜ್ಯ ಸಮಿತಿ ಸದಸ್ಯ ಬಿ. ರಾಘವೇಂದ್ರ, ಕಾರ್ಯಕಾರಿ ಸಮಿತಿ ಸದಸ್ಯರಾದ ರಂಗಸ್ವಾಮಿ‌ ಮಾದಾಪುರ, ಸುರೇಶ್, ಕೆ.ಪಿ. ನಾಗರಾಜ್, ಮಾಚಮ್ಮ ಮಲ್ಲಿಗೆ ಶಿವಮೂರ್ತಿ ಜುಪ್ತಿಮಠ್, ಬೀರೇಶ್, ಜುಪ್ತಿಮಠ್, ಹಿರಿಯ ಪತ್ರಕರ್ತರಾದ ಕಾಶಿನಾಥ್, ಪ್ರಭುರಾಜನ್, ಪ್ರಗತಿ ಗೋಪಾಲಕೃಷ್ಣ ಇನ್ನು‌ ಮುಂತಾದವರು ಹಾಜರಿದ್ದರು.

ಇನ್ನು ಕ್ರಿಕೆಟ್ ಪಂದ್ಯಾವಳಿಯಲ್ಲಿ ದಿಲೀಪ್ ಚೌಡಳ್ಳಿ(54*) ಅವರ ಭರ್ಜರಿ ಬ್ಯಾಟಿಂಗ್ ಹಾಗೂ ರಾಕೇಶ್ ಅವರ ಆಕರ್ಷಕ ಬೌಲಿಂಗ್ ನೆರವಿನಿಂದ ಅಧ್ಯಕ್ಷರ ಇಲವೆನ್ ತಂಡ 3 ರನ್‌ಗಳ ರೋಚಕ ಗೆಲುವು ಸಾಧಿಸಿತು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಮೈಸೂರು ವಿವಿ ಸ್ಪೋರ್ಟ್ಸ್ ಪೆವಿಲಿಯನ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಅಧ್ಯಕ್ಷರ ಇಲವೆನ್ ತಂಡ 8 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 88 ರನ್‌ಗಳಿಸಿತು. ತಂಡದ ಪರ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ TV9 ವರದಿಗಾರ ದಿಲೀಪ್ ಚೌಡಳ್ಳಿ(54*) ರನ್‌ಗಳಿಸಿ ಮಿಂಚಿದರು.

ಬಳಿಕ 89 ರನ್‌ಗಳ ಟಾರ್ಗೆಟ್ ಚೇಸ್ ಮಾಡಿದ ಉಪಾಧ್ಯಕ್ಷರ ಇಲವೆನ್, ನಿಗದಿತ 8 ಓವರ್‌ಗಳಲ್ಲಿ 9 ವಿಕೆಟ್‌ಗಳನ್ನ ಕಳೆದುಕೊಂಡು 85 ರನ್‌ಗಳಿಸುವ ಮೂಲಕ 3 ರನ್‌ಗಳ ವಿರೋಚಿತ ಸೋಲು ಕಂಡಿತು. ಒಂದು ಹಂತದಲ್ಲಿ ಸುಲಭವಾಗಿ ಚೇಸ್ ಮಾಡುವ ಸೂಚನೆ ನೀಡಿದ್ದ ಉಪಾಧ್ಯಕ್ಷರ ಇಲವೆನ್ ತಂಡ ಸತತವಾಗಿ ವಿಕೆಟ್‌ಗಳನ್ನ ಕಳೆದುಕೊಂಡು ಸೋಲಿನ‌ ಆಘಾತ ಕಂಡಿತು. ಉತ್ತಮ ಬೌಲಿಂಗ್ ದಾಳಿ ನಡೆಸಿದ ರಾಕೇಶ್ 3 ವಿಕೆಟ್‌ಗಳನ್ನ ಪಡೆದು ತಂಡದ ಗೆಲುವಿಗೆ ಕಾರಣರಾದರು. ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನ ಆಲ್ರೌಂಡ್ ಪ್ರದರ್ಶನ ನೀಡಿದ ದಿಲೀಪ್ ಚೌಡಳ್ಳಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು