ಮೈಸೂರು: ಜು.5ರಿಂದ ರಾಷ್ಟ್ರಮಟ್ಟದ ಮಹಿಳೆಯರ ಖೋ-ಖೋ

ಮೈಸೂರು: ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ವಹಿತಿಯಿಂದ ಇದೇ ಮೊದಲ ಬಾರಿಗೆ ಜು.5ರಿಂದ 7ರವರೆಗೆ ರಾಷ್ಟ್ರಮಟ್ಟದ ಮಹಿಳೆಯರ ಖೋ-ಖೋ ಪಂದ್ಯಾವಳಿ ನಡೆಯಲಿದೆ.

ಸ್ಪೋರ್ಟ್ಸ್ ಪೆವಿಲಿಯನ್ ಮೈದಾನದಲ್ಲಿ 2021-22ನೇ ಸಾಲಿನ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಖೋ-ಖೋ ಪಂದ್ಯಾವಳಿ ನಡೆಯಲಿದ್ದು, ನಾಲ್ಕು ವರ್ಷಗಳ ಬಳಿಕ ಮೈಸೂರು ವಿವಿ ಆತಿಥ್ಯ ವಹಿಸುತ್ತಿರುವ ರಾಷ್ಟ್ರಮಟ್ಟದ ಕ್ರೀಡಾಕೂಟ ಇದಾಗಿದೆ. 2017-18ರಲ್ಲಿ ಅಖಿಲ ಭಾರತ ಪುರುಷರ ಖೋ-ಖೋ ಪಂದ್ಯಾವಳಿಗೆ ಆತಿಥ್ಯ ವಹಿಸಿತ್ತು.

ಇನ್ನು 2017-18ನೇ ಸಾಲಿನ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಖೋ-ಖೋ ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಿತ್ತು. ಅದನ್ನು ಬಿಟ್ಟರೆ ಎಂದೂ ಮಹಿಳೆಯರ ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಯನ್ನು ಆಯೋಜಿಸಿಲ್ಲ. ಈಗ ಆ ಕೊರಗನ್ನು ನೀಗಿಸುವ ನಿಟ್ಟಿನಲ್ಲಿ ಅಖಿಲ ಭಾರತ ವಿಶ್ವವಿದ್ಯಾಲಯಗಳ ಮಟ್ಟದ ಪಂದ್ಯಾವಳಿ ಆಯೋಜನೆಗೆ ಮೈಸೂರು ವಿವಿ ಮುಂದಾಗಿದ್ದು, ವಿವಿಯ ಸ್ಪೋರ್ಟ್ಸ್ ಪೆವಿಲಿಯನ್‌ನಲ್ಲಿ ಸಕಲ ಸಿದ್ಧತೆ ಮಾಡಲಾಗುತ್ತಿದೆ.

ಟೂರ್ನಿ ಲೀಗ್ ಕಂ ನಾಕ್ ಔಟ್ ಮಾದರಿಯಲ್ಲಿ ನಡೆಯಲಿದೆ. ಪಂದ್ಯಾವಳಿಗಾಗಿ ಸ್ಪೋರ್ಟ್ಸ್ ಪೆವಿಲಿಯನ್ ಆವರಣದಲ್ಲಿ ಈಗಿರುವ ಎರಡು ಮೈದಾನಗಳ ಜತೆಗೆ ಸುಸಜ್ಜಿತವಾದ ೪ ಮೈದಾನಗಳನ್ನು ನಿರ್ಮಿಸಲಾಗುತ್ತಿದೆ. ಈ ಪೈಕಿ ಸ್ಪೋರ್ಟ್ಸ್ ಪೆವಿಲಿಯನ್ ಒಳಾಂಗಣ ಕ್ರೀಡಾಂಗಣದಲ್ಲಿ ಮ್ಯಾಟ್ ವ್ಯವಸ್ಥೆಯ ಒಂದು ಮೈದಾನ ಸಿದ್ಧ ಪಡಿಸಲಾಗುತ್ತಿದೆ. ಒಂದು ವೇಳೆ ಮಳೆ ಬಂದರೆ ಪಂದ್ಯಗಳನ್ನು ಒಳಾಂಗಣದಲ್ಲಿ ಆಯೋಜಿಸಲು ಚಿಂತಿಸಲಾಗಿದೆ.

ಮೂರು ದಿನಗಳ ಕಾಲ ನಡೆಯುವ ಪಂದ್ಯಾವಳಿಯಲ್ಲಿ ದಕ್ಷಿಣ, ಉತ್ತರ, ಪೂರ್ವ, ಪಶ್ಚಿಮ ವಲಯಗಳಿಂದ ತಲಾ ನಾಲ್ಕು ತಂಡಗಳು ಭಾಗಿಯಾಗಲಿವೆ. ದಕ್ಷಿಣ ಭಾರತ ವಲಯದಿಂದ ಮೈಸೂರು ವಿವಿ, ಕ್ಯಾಲಿಕಟ್ ವಿವಿ, ವಾರಂಗಲ್‌ನ ಕಾಕತೀಯ ವಿವಿ, ಕೇರಳ ವಿವಿ ತಂಡಗಳು ಭಾಗವಹಿಸಲಿವೆ. ಒಟ್ಟು 16 ತಂಡಗಳಿಂದ 192 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ವಿವಿಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ.ಕೃಷ್ಣಯ್ಯ ತಿಳಿಸಿದ್ದಾರೆ.

Gayathri SG

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

9 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

33 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago