ನವದೆಹಲಿ: ಭಾರತ ವಿಶ್ವಕಪ್ ನಲ್ಲಿ ಸೋಲನ್ನಪ್ಪಿದೆ. ಆದರೆ ವಿಶ್ವಕಪ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಮೊಹಮ್ಮದ್ ಶಮಿ, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿದ್ದಾರೆ.
ಬಿಜೆಪಿ ನಾಯಕ ಅನಿಲ್ ಬಲುನಿ ಅವರ ದೆಹಲಿ ನಿವಾಸದಲ್ಲಿ ಆಯೋಜಿಸಲಾಗಿದ್ದ ಈಗಾಸ್ ಆಚರಣೆಯಲ್ಲಿ ಮೊಹಮ್ಮದ್ ಶಮಿ ಪಾಲ್ಗೊಂಡಿದ್ದರು. ಈಗಾಸ್ ಉತ್ತರಾಖಂಡದ ಪ್ರಾಚೀನ ಸಾಂಪ್ರದಾಯಿಕ ಹಬ್ಬವಾಗಿದ್ದು, ಈ ಕಾರ್ಯಕ್ರಮದಲ್ಲಿ ಶಮಿ ಅಲ್ಲದೆ, ಗೃಹ ಸಚಿವ ಅಮಿತ್ ಶಾ ಮತ್ತು ಅಜಿತ್ ದೋವಲ್ ಸೇರಿದಂತೆ ಬಿಜೆಪಿಯ ಹಲವಾರು ಪ್ರಮುಖ ನಾಯಕರು ಭಾಗವಹಿಸಿದ್ದರು.
ಅಮಿತ್ ಶಾ ಮತ್ತು ದೋವಲ್ ಜೊತೆಗಿರುವ ಶಮಿ ಅವರ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅವರು ಕೇಸರಿ ಪಕ್ಷ ಸೇರುವ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಕೇಳಿಬರುತ್ತಿವೆ. ಬಿಜೆಪಿಯ ಇತ್ತೀಚಿನ ಬೆಳವಣಿಗೆಗಳು ಈ ವದಂತಿಗಳಿಗೆ ಮತ್ತಷ್ಟು ರೆಕ್ಕೆಪುಕ್ಕ ನೀಡಿವೆ.
View this post on Instagram