ಕಾರ್ಕಳ: ಬೆಂಗಳೂರಿನ ವಿದ್ಯಾನಗರದಲ್ಲಿ ನಡೆದ ಕರ್ನಾಟಕ ರಾಜ್ಯ 59ನೇ ಕ್ರಾಸ್ ಕಂಟ್ರಿ ಸ್ಪರ್ಧೆಯ 18 ವರ್ಷದೊಳಗಿನವರ ವಿಭಾಗದ 4 ಕಿ.ಮೀ ಓಟದಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ಬಿಕಾಂ ನ ನಂದಿನಿ ಜಿ. ಚಿನ್ನದ ಪದಕ ಪಡೆದಿದ್ದಾರೆ.
ಈ ಪ್ರದರ್ಶನದೊಂದಿಗೆ, ಅವರು ಜನವರಿ 9 ಮತ್ತು 10 ರಂದು ಉತ್ತರ ಪ್ರದೇಶದ ಮೀರತ್ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರಾಸ್ ಕಂಟ್ರಿ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ.