ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ ಜೂನ್ ತಿಂಗಳಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯೋ ಚುಟುಕು ಸಮರಕ್ಕೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟವಾಗಿದೆ.ಆದರೆ ಬಿಸಿಸಿಐ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ದಿನೇಶ್ ಕಾರ್ತಿಕ್ ಅವರನ್ನು ಕೈ ಬಿಟ್ಟಿದೆ.
ಕೇವಲ ಕೆ.ಎಲ್ ರಾಹುಲ್ ಮಾತ್ರವಲ್ಲ ದಿನೇಶ್ ಕಾರ್ತಿಕ್ಗೂ ಬಿಸಿಸಿಐ ಅನ್ಯಾಯ ಮಾಡಿದೆ. ಇವರ ಬದಲಿಗೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಟೀಮ್ ಇಂಡಿಯಾದ ಮೊದಲ ಆಯ್ಕೆ ಸಂಜು ಸ್ಯಾಮ್ಸನ್ ಆಗಿದ್ದಾರೆ. ಜತೆಗೆ ಬರೋಬ್ಬರಿ 2 ವರ್ಷಗಳ ಬಳಿಕ ರಿಷಭ್ ಪಂತ್ ಕೂಡ ಕಮ್ಬ್ಯಾಕ್ ಮಾಡಿದ್ದಾರೆ.
ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್-ಬ್ಯಾಟರ್ ಸ್ಥಾನ ಖಾಲಿ ಇತ್ತು. ಆ ಸ್ಥಾನದ ಮೇಲೆ ಹಲವಾರು ಪ್ಲೇಯರ್ಸ್ ಕಣ್ಣಿಟ್ಟಿದ್ದರು. ಅದರಲ್ಲಿ ಕೆಎಲ್ ರಾಹುಲ್ ಸಹ ಒಬ್ಬರು ಇದ್ದರು. ವಿಕೆಟ್ ಕೀಪರ್ ಸ್ಥಾನಕ್ಕೆ ಪಂತ್, ಜುರೆಲ್, ಜಿತೇಶ್, ಇಶಾನ್, ಸಂಜು ಹೀಗೆ ಸಾಲು ಸಾಲು ಆಟಗಾರರು ರೇಸ್ನಲ್ಲಿದ್ದರು. ಕೊನೆಗೂ ರಾಹುಲ್ಗೆ ಕೊಕ್ ನೀಡಲಾಗಿದೆ.