ದೆಹಲಿ: ಪುಣೆಯ ಎಂಸಿಎ ಮೈದಾನದಲ್ಲಿ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದಾರೆ. ಎಡಗಾಲಿನ ಪಾದಕ್ಕೆ ಪೆಟ್ಟು ಮಾಡಿಕೊಂಡಿರುವ ಪಾಂಡ್ಯ ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಬಿಸಿಸಿ, ಹಾರ್ದಿಕ್ ಪಾಂಡ್ಯ ನಿನ್ನೆ ಕಾಲಿಗೆ ಏಟು ಮಾಡಿಕೊಂಡಿದ್ದರು. ಸ್ಕ್ಯಾನ್ ಮಾಡಲಾಗಿದ್ದು, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಹೀಗಾಗಿ ಅವರು ಇವತ್ತು ಧರ್ಮಶಾಲಾಗೆ ವಿಮಾನ ಹತ್ತುವುದಿಲ್ಲ ಎಂದು ಹೇಳಿದೆ.
ಈ ಮೂಲಕ ಅಕ್ಟೋಬರ್ 22 ರಂದು ನ್ಯೂಜಿಲೆಂಡ್ ವಿರುದ್ಧ ನಡೆಯುವ ಪಂದ್ಯವನ್ನು ಹಾರ್ದಿಕ್ ಪಾಂಡ್ಯ ಆಡುತ್ತಿಲ್ಲ ಅನ್ನೋದು ನಿಜವಾಗಿದೆ.