News Karnataka Kannada
Monday, May 06 2024
ಕ್ರೀಡೆ

ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್

ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಆರ್ಸಿಬಿ 35 ರನ್ಗಳ ಅಂತರದಿಂದ ಸೋಲಿಸಿದೆ. ಪಂದ್ಯ ಮುಗಿದ ಬಳಿಕ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದಿದ್ದಾರೆ.
Photo Credit : NewsKarnataka

ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಸನ್​ ರೈಸರ್ಸ್​ ಹೈದರಾಬಾದ್ ತಂಡವನ್ನು ಆರ್​​ಸಿಬಿ 35 ರನ್​ಗಳ ಅಂತರದಿಂದ ಸೋಲಿಸಿದೆ. ಪಂದ್ಯ ಮುಗಿದ ಬಳಿಕ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದಿದ್ದಾರೆ.

ಕಮ್ಮಿನ್ಸ್​  ಮಾತನಾಡಿ, ಸಹ ಆಟಗಾರರಿಗೆ ಹಿತ ನುಡಿಯನ್ನು ನುಡಿದರು. ಇಂದು ನಮಗೆ ಒಳ್ಳೆಯ ರಾತ್ರಿ ಅಲ್ಲ. ದುರಾದೃಷ್ಟವಶಾತ್ ನಮ್ಮ ಇನ್ನಿಂಗ್ಸ್‌ನಲ್ಲಿ ಕೆಲವು ವಿಕೆಟ್‌ಗಳನ್ನು ಕಳೆದುಕೊಂಡಿದ್ದೇವೆ. ನಾವು ಮೊದಲು ಬ್ಯಾಟ್ ಮಾಡಬೇಕಾಗಿತ್ತು.

ಗೆಲ್ಲುವ ಮೊದಲು ನಾವು ನಮ್ಮ ಪರವಾಗಿ ಕೆಲಸ ಮಾಡಬೇಕು. ನಿನ್ನೆಯ ದಿನ ಗೆಲುವು ನಮ್ಮ ಪರವಾಗಿ ಇರಲಿಲ್ಲ ಎಂದು ಭಾವಿಸುತ್ತೇನೆ ಎಂದರು. ಗೆದ್ದಾಗ ನಾನು ಮಾತನಾಡುತ್ತೇನೆ, ಸೋತಾಗ ಕೋಚ್ ಡೇನಿಯಲ್ ವೆಟ್ಟೋರಿ ಮಾತನಾಡುತ್ತಾರೆ.

ಆದರೆ ನಮ್ಮ ಹುಡುಗರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇದು ಟಿ20 ಕ್ರಿಕೆಟ್! ನೀವು ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ. ಸೋಲಿನ ಬಗ್ಗೆ ಹೆಚ್ಚು ಗಮನ ಕೊಡಬೇಡಿ. ನಮ್ಮದು ಬಲಿಷ್ಠ ತಂಡ. ಬ್ಯಾಟಿಂಗ್ ಲೈನಪ್ ತುಂಬಾನೇ ಚೆನ್ನಾಗಿದೆ. ಆದರೂ ಇದು ಪ್ರತಿ ಪಂದ್ಯದಲ್ಲೂ ಕೆಲಸ ಮಾಡಲ್ಲ ಎಂದರು.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು