ಭಾರತ ಕ್ರಿಕೆಟ್ ತಂಡವು ಟಿ20 ವಿಶ್ವಕಪ್ ಗೆದ್ದಿದ್ದು, ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡುವ ಮೂಲಕ ಟೀಮ್ ಇಂಡಿಯಾಗೆ ಶುಭಾಶಯ ಹೇಳಿದ್ದಾರೆ.
ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತವಾದ ಪ್ರದರ್ಶನ ನೀಡಿದ ಮತ್ತು ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಕ್ಕೆ ಅಭಿನಂದನೆಗಳು. ಸೂರ್ಯಕುಮಾರ್ ಯಾದವ್ ಎಂತಹ ಅದ್ಭುತ ಕ್ಯಾಚ್ ಹಿಡಿದಿರಿ.
ಈ ಗೆಲುವು ರೋಹಿತ್ ಶರ್ಮಾ ಅವರ ನಾಯಕತ್ವಕ್ಕೆ ಸಾಕ್ಷಿಯಾಗಿದೆ. ಟೀಮ್ ಇಂಡಿಯಾ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನವನ್ನು ಕಳೆದುಕೊಳ್ಳಲಿದೆ. ಟೀಮ್ ಇಂಡಿಯಾ ನಮ್ಮ ದೇಶದ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸಿದೆ. ಎಂದು ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
Ad