Categories: ಕ್ರೀಡೆ

ಟೀಂ ಇಂಡಿಯಾದ ಮುಖ್ಯ ಕೋಚ್​​ ಆಗಿ ಮತ್ತೆ ಕನ್ನಡಿನ ಆಯ್ಕೆ

ಮುಂಬೈ: ಭಾರತದ ಕ್ರಿಕೆಟ್​​ ತಂಡದ ಮುಖ್ಯ ಕೋಚ್ ಆಗಿ ಮತ್ತೆ ಕನ್ನಡಿಗ ರಾಹುಲ್​ ದ್ರಾವಿಡ್​ ಅವರು ಮರು ಆಯ್ಕೆ ಆಗಿದ್ದಾರೆ. 2023 ವಿಶ್ವಕಪ್​ ಟೂರ್ನಿ ವೇಳೆ ಟೀಮ್​ ಇಂಡಿಯಾ ಸತತ 10 ಪಂದ್ಯಗಳನ್ನು ಗೆದ್ದು ಫೈನಲ್​ನಲ್ಲಿ ಮುಗ್ಗರಿಸಿತ್ತು. ಈ ಟೂರ್ನಿಯಲ್ಲೇ ದ್ರಾವಿಡ್ ಅವರ ಅವಧಿ ಮುಗಿದಿತ್ತು. ಆದ್ರೆ ಈ ಬಗ್ಗೆ ಬಿಸಿಸಿಐ ಸಭೆ ನಡೆಸಿ ಮತ್ತೆ ರಾಹುಲ್ ದ್ರಾವಿಡ್​​ರನ್ನೇ ಮುಖ್ಯ ಕೋಚ್​ ಆಗಿ ಮರು ನೇಮಕ ಮಾಡಿದೆ.

ರಾಹುಲ್​ ದ್ರಾವಿಡ್​ ಅವರ ಮುಖ್ಯ ಕೋಚ್ ಅವಧಿ ಮುಗಿಯುತ್ತಿದ್ದಂತೆ ಐಪಿಎಲ್​ ಫ್ರಾಂಚೈಸಿಗಳು ಸಂಪರ್ಕಿಸಿದ್ದವು ಎನ್ನಲಾಗಿದೆ. ಆದರೆ ದ್ರಾವಿಡ್​ ಇದು ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ಮತ್ತೆ ಭಾರತ ತಂಡದ ಕೋಚ್ ಆಗಿ ಮುಂದುವರೆಯಲು ನಿರ್ಧಾರ ಮಾಡಿದ್ದಾರೆ.

ಇನ್ನು ಈ ಬಗ್ಗೆ ಬಿಸಿಸಿಐ ಪ್ರಕಟಣೆ ಹೊರಡಿಸಿದ್ದು, ರಾಹುಲ್ ದ್ರಾವಿಡ್​ ಹಾಗೂ ಅವರ ಸಹಾಯಕ ಸಿಬ್ಬಂದಿ ಕಾಂಟ್ರಾಕ್ಟ್​ ಹುದ್ದೆಯನ್ನು ಮುಂದುವರೆಸಲಾಗುವುದು. ಇತ್ತೀಚೆಗೆ 2023ರ ವಿಶ್ವಕಪ್ ಪಂದ್ಯಾವಳಿಗಳು ಮುಗಿದ ನಂತರ ಅವರ ಒಪ್ಪಂದದ ಅವಧಿ ಮುಗಿದು ಹೋಗಿತ್ತು. ಹೀಗಾಗಿ ಬಿಸಿಸಿಐ ಅಧಿಕಾರಿಗಳು, ರಾಹುಲ್ ದ್ರಾವಿಡ್ ಜೊತೆ ಈ ಬಗ್ಗೆ ಸಭೆ ನಡೆಸಿ ಚರ್ಚೆ ನಡೆಸಲಾಗಿತ್ತು. ಇದರಲ್ಲಿ ಮರು ನೇಮಕಕ್ಕೆ ದ್ರಾವಿಡ್ ಅವರು ಒಪ್ಪಿಗೆ ಸೂಚಿಸಿದ್ದಲ್ಲದೇ ಸಭೆಯಲ್ಲಿದ್ದ ಅಧಿಕಾರಿಗಳೆಲ್ಲ ಸರ್ವಾನುಮತದಿಂದ ಒಪ್ಪಿಕೊಂಡಿದ್ದಾರೆ ಎಂದು ಹೇಳಿದೆ.

Ashitha S

Recent Posts

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

8 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

15 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

25 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

36 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

46 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

52 mins ago