ಬೆಂಗಳೂರು: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಾಡಲು ಸಜ್ಜಾಗಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಸಾಕ್ಷಿಯಾಗಲಿದೆ.
ಮೊದಲ ಪಂದ್ಯದಲ್ಲೇ ಆರ್ಸಿಬಿ ಚೆನ್ನೈ ವಿರುದ್ಧ ಸೋತಿತ್ತು. 174 ರನ್ ಟಾರ್ಗೆಟ್ ನೀಡಿದ್ರೂ 6 ವಿಕೆಟ್ಗಳ ಸೋಲು ಅನುಭವಿಸಿತ್ತು. ಆರ್ಸಿಬಿ ನೀಡಿದ್ರೂ ಬಿಗ್ ಟಾರ್ಗೆಟ್ ಆದ್ರೂ ಬೌಲರ್ಗಳು ಡಿಫೆಂಡ್ ಮಾಡಲು ಆಗಲಿಲ್ಲ. ಈ ಸೋಲಿನಿಂದ ಕಂಗೆಟ್ಟಿರೋ ಆರ್ಸಿಬಿ ತವರಿನಲ್ಲಿ ಪಂಜಾಬ್ ತಂಡವನ್ನು ಕಟ್ಟಿಹಾಕಲು ಸಜ್ಜಾಗಿದೆ.
ಇನ್ನೊಂದೆಡೆ ಪಂಜಾಬ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಗೆದ್ದು ಬೀಗಿತ್ತು. ಸದ್ಯ ಪಂಜಾಬ್ ಸ್ಟ್ರೆಂಥ್ ಸ್ಯಾಮ್ ಕರನ್ ಮತ್ತು ಲಿಯಾಮ್ ಲಿವಿಂಗ್ಸ್ಟೋನ್ ಆಗಿದ್ದಾರೆ. ಆರ್ಸಿಬಿಯಲ್ಲಿ ವಿರಾಟ್, ಫಾಫ್, ದಿನೇಶ್ ಕಾರ್ತಿಕ್, ಮ್ಯಾಕ್ಸ್ವೆಲ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್ ಇದ್ದಾರೆ.