ಕೋಲ್ಕತ್ತ: ಟೀಂ ಇಂಡಿಯಾಗೆ ಕಳೆದ ವರ್ಷ ಪಾದಾರ್ಪಣೆ ಮಾಡಿದ ರಿಂಕು ಸಿಂಗ್, ಆ ಬಳಿಕ ಚುಟುಕು ಕ್ರಿಕೆಟ್ನಲ್ಲಿ ತನ್ನ ಹೆಜ್ಜೆಗುರುತು ಮೂಡಿಸುತ್ತಿದ್ದಾರೆ. 2023ರ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಪರ 14 ಪಂದ್ಯಗಳನ್ನಾಡಿ 474 ರನ್ ಸಿಡಿಸುವ ಮೂಲಕ ಟೀಂ ಇಂಡಿಯಾ ಆಯ್ಕೆ ಸಮಿತಿ ಗಮನ ಸೆಳೆಯುವಲ್ಲಿ ರಿಂಕು ಸಿಂಗ್ ಯಶಸ್ವಿಯಾಗಿದ್ದರು.
26 ವರ್ಷದ ರಿಂಕು ಸಿಂಗ್ ಉತ್ತರಪ್ರದೇಶದ ಆಲಿಘರ್ನಲ್ಲಿ ತೀರಾ ಸಾಮಾನ್ಯ ಕುಟುಂಬದಲ್ಲಿ ಜನಿಸಿದರು. ತಮ್ಮ ಬಿಡುವಿನ ಸಮಯದಲ್ಲಿ ತಂದೆ ಖಂಚಂದ್ರ ಸಿಂಗ್ ಸಹೋದರ ಜೀತ್ ಸಿಂಗ್ ಜತೆ ಮನೆ ಮನೆಗೆ ಎಲ್ಪಿಜಿ ಸಿಲಿಂಡರ್ ಡಿಲೆವರಿ ಮಾಡುತ್ತಿದ್ದರು.
ಕಳೆದ ವರ್ಷ ಒಂದು ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಿಂಕು ಸಿಂಗ್, ತಮ್ಮ ತಂದೆ ಈ ಮೊದಲು ಕುಟುಂಬಕ್ಕೆ ಆಸರೆಯಾಗಿದ್ದ ಸಿಲಿಂಡರ್ ಡೆಲಿವರಿ ಕೆಲಸವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದರು.
‘ನಾನು ನನ್ನ ತಂದೆಗೆ ಇನ್ನಾದರೂ ನೀವು ರಿಲ್ಯಾಕ್ಸ್ ಮಾಡಿ. ನೀವು ಇಷ್ಟು ವರ್ಷ ಸಿಲಿಂಡರ್ ಡೆಲಿವರಿ ಮಾಡಿದ್ದು ಸಾಕು ಎಂದು ಹೇಳಿದ್ದೆ. ಆದರೆ ನನ್ನ ಅಪ್ಪ ಈಗಲೂ ತಾವು ಮಾಡುತ್ತಿರುವ ಕೆಲಸವನ್ನು ಖುಷಿಯಿಂದ ಮಾಡುತ್ತಿದ್ದಾರೆ. ನಾನು ಅವರ ಅಭಿಪ್ರಾಯವನ್ನು ಗೌರವಿಸುತ್ತೇನೆ. ಯಾಕೆಂದರೆ ಸುಮ್ಮನೇ ಮನೆಯಲ್ಲಿ ಕೂತು ಅವರಿಗೂ ಬೋರ್ ಆಗಬಹುದು. ಜೀವನಪೂರ್ತಿ ದುಡಿಮೆಯಲ್ಲೇ ಕಾಲ ಕಳೆಯುವವರು ದಿಢೀರ್ ಎನ್ನುವಂತೆ ಸುಮ್ಮನೆ ಮನೆಯಲ್ಲಿ ಕೂರುವುದು ಕಷ್ಟವಾಗಬಹುದು’ ಎಂದು ರಿಂಕು ಹೇಳಿದ್ದರು.
ಇನ್ನು ಈ ಬೆನ್ನಲ್ಲೇ ರಿಂಕು ಸಿಂಗ್ ತಂದೆ ಸಿಲಿಂಡರ್ ಡೆಲಿವರಿ ಮಾಡುತ್ತಿದ್ದಾರೆ ಎನ್ನುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರಿಂಕು ಸಿಂಗ್ ಅವರ ತಂದೆಯ ಸರಳ ಹಾಗೂ ತಾವು ತಮ್ಮ ಕುಟುಂಬಕ್ಕೆ ಆಸರೆಯಾಗಿದ್ದ ಉದ್ಯೋಗದ ಮೇಲಿನ ಪ್ರೀತಿಯ ಬಗ್ಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…
ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…
ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.
ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…
ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…