Categories: ಕ್ರೀಡೆ

ರಿಷಭ್ ಪಂತ್​ಗೆ ಗ್ರೀನ್​ ಸಿಗ್ನಲ್ ನೀಡಿದ ಎನ್‌ಸಿಎ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರಲ್ಲಿ ರಿಷಭ್ ಪಂತ್ ಕಣಕ್ಕಿಳಿಯುವುದು ಖಚಿತವಾಗಿದೆ. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್​ ಅಕಾಡೆಮಿಯಲ್ಲಿ(ಎನ್‌ಸಿಎ) ನಡೆದ ಫಿಟ್​ನೆಸ್ ಟೆಸ್ಟ್​ನಲ್ಲಿ ರಿಷಭ್ ಪಾಸ್ ಆಗಿದ್ದು, ಈ ಮೂಲಕ ಐಪಿಎಲ್ ಆಡಲು ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. ಅದರಂತೆ ಈ ಬಾರಿ ಪಂತ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಣಕ್ಕಿಳಿಯಲಿದೆ.

ಇದಕ್ಕೂ ಮುನ್ನ ರಿಷಭ್ ಪಂತ್ ಫಿಟ್​ನೆಸ್ ಟೆಸ್ಟ್​ನಲ್ಲಿ ವಿಫಲರಾದರೆ, ಅವರು ವಿಕೆಟ್ ಕೀಪಿಂಗ್ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೀಗ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್​ನಲ್ಲಿ ತಮ್ಮ ಸಾಮರ್ಥ್ಯವನ್ನು ಪಂತ್ ತೆರೆದಿಟ್ಟಿದ್ದು, ಈ ಮೂಲಕ ಐಪಿಎಲ್​ ಆಡಲು NCA ಕಡೆಯಿಂದ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದಾರೆ.

ಅತ್ತ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಕೂಡ ಶುರುವಾಗಲಿದೆ. ಹೀಗಾಗಿ ಈ ಬಾರಿಯ ಐಪಿಎಲ್ ರಿಷಭ್ ಪಂತ್ ಪಾಲಿಗೆ ನಿರ್ಣಾಯಕ. ಏಕೆಂದರೆ ಕಳೆದ ಒಂದು ವರ್ಷದಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಪಂತ್ ಐಪಿಎಲ್​ನಲ್ಲಿ ಮಿಂಚಿದರೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯಬಹುದು. ಹೀಗಾಗಿ ಈ ಬಾರಿಯ ಐಪಿಎಲ್​ ರಿಷಭ್ ಅವರ ಟೀಮ್ ಇಂಡಿಯಾ ಕಂಬ್ಯಾಕ್​ ಅನ್ನು ಕೂಡ ನಿರ್ಧರಿಸಲಿದೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್ ಪಂತ್ ಅವರ ಮರಳುವಿಕೆಯಿಂದ ನಾಯಕತ್ವ ಕೂಡ ಬದಲಾಗಲಿದೆ. ಅಂದರೆ ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಿದ್ದರು. ಇದೀಗ ಪಂತ್ ಕಂಬ್ಯಾಕ್​ನಿಂದಾಗಿ ವಾರ್ನರ್ ಉಪನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ರಿಷಭ್ ಪಂತ್ ಸಾರಥ್ಯದಲ್ಲಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಕಣಕ್ಕಿಳಿಯಲಿದೆ.

 

Ashitha S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

16 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

30 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

42 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

58 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago