Bengaluru 24°C
Ad

ಸೆಮಿಸ್​ಗೂ ಮುನ್ನ ಟೀಮ್ ಇಂಡಿಯಾದಲ್ಲಿ ಬದಲಾವಣೆ; ವರದಿ

Teamindia

ವದೆಹಲಿ: ಟೀಮ್ ಇಂಡಿಯಾ ಇಂದು (ಜೂನ್​ 27) ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯವನ್ನು ಆಡಲಿದೆ. ಗಯಾನಾ ಮೈದಾನದಲ್ಲಿ ರೋಹಿತ್ ಸೇನೆ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. 2022ರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್​ ಇಂಡಿಯಾ ಹೀನಾಯ ಸೋಲು ಕಂಡಿದೆ.

Ad
300x250 2

ಆ ಸೋಲಿಗೆ ಈ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳಲು ರೋಹಿತ್ ಪಡೆ ಕಾಯುತ್ತಿದೆ. ಈ ಸೆಮಿಫೈನಲ್ ಪಂದ್ಯವನ್ನು ಗೆದ್ದು ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಶಸ್ತಿ ಹೋರಾಟಕ್ಕೆ ಸಜ್ಜಾಗಬೇಕಾದರೆ ನಾಯಕ ರೋಹಿತ್ ಶರ್ಮ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೂಡ ಸೆಮಿಸ್‌ನಲ್ಲಿ ಬಲಿಷ್ಠ ತಂಡದೊಂದಿಗೆ ಕಣಕ್ಕೆ ಇಳಿಯುವ ಸಂಕಲ್ಪ ತೊಟ್ಟಂತಿದೆ. ಅದಕ್ಕಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ.

ಆಕ್ರಮಣಕಾರಿ ಯುವ ಆಟಗಾರನನ್ನು ತಂಡಕ್ಕೆ ತೆಗೆದುಕೊಳ್ಳುವ ನಿರೀಕ್ಷೆ ಇದೆ. ಸದ್ಯ ತಂಡದಲ್ಲಿರುವ ಕಳಪೆ ಆಟಗಾರನೆಂದರೆ ಅದು ರವೀಂದ್ರ ಜಡೇಜಾ. ಈ ವಿಶ್ವಕಪ್ ಟೂರ್ನಿಯಲ್ಲಿ ಜಡೇಜಾ ತಂಡಕ್ಕೆ ಉಪಯುಕ್ತವಾಗಿಲ್ಲ. ಈ ಟೂರ್ನಿಯಲ್ಲಿ ಐರ್ಲೆಂಡ್ ವಿರುದ್ಧ ಟೀಮ್​ ಇಂಡಿಯಾ ಆಡಿದ ಮೊದಲ ಪಂದ್ಯದಲ್ಲಿ ಜಡೇಜಾ ಬ್ಯಾಟಿಂಗ್ ಅವಕಾಶ ಸಿಗಲಿಲ್ಲ. ಆದರೆ, ಒಂದು ಓವರ್ ಬೌಲ್ ಮಾಡಿ 7 ರನ್ ನೀಡಿ ಒಂದೂ ವಿಕೆಟ್ ಪಡೆಯಲಿಲ್ಲ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಜಡೇಜಾ ಡಕೌಟ್​ ಆದರು. ಅಲ್ಲದೆ, ಎರಡು ಓವರ್ ಬೌಲ್ ಮಾಡಿದ ಅವರು ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ.

ಅಮೆರಿಕ ವಿರುದ್ಧದ ಪಂದ್ಯದಲ್ಲಿ ಜಡೇಜಾ ಬ್ಯಾಟಿಂಗ್‌ಗೆ ಬರಲಿಲ್ಲ ಮತ್ತು ಬೌಲಿಂಗ್​ನಲ್ಲೂ ಕಮಾಲ್​ ಮಾಡಲಿಲ್ಲ. ಹೀಗಾಗಿ ತಂಡದಲ್ಲಿ ಜಡೇಜಾ ನಿಷ್ಪ್ರಯೋಜಕರಾಗಿದ್ದಾರೆ. ತಂಡಕ್ಕೆ ಹೊರೆಯಾಗಿರುವ ಜಡೇಜಾ ಅವರನ್ನು ಹೊರತುಪಡಿಸಿ ಸಂಜು ಸ್ಯಾಮ್ಸನ್ ಅವರನ್ನು ರೋಹಿತ್ ತೆಗೆದುಕೊಳ್ಳಲು ಬಯಸಿದ್ದಾರೆ ಎಂದು ವರದಿಯಾಗಿದೆ.

ಅಕ್ಷರ್​ ಪಟೇಲ್​ ಮತ್ತು ಕುಲದೀಪ್​ ಯಾದವ್​ಗೆ ಹೋಲಿಕೆ ಮಾಡಿದರೆ ಜಡೇಜಾ ಕೊಂಚ ಹಿಂದುಳಿದಿದ್ದಾರೆ. ಜಡೇಜಾಗಿಂತ ಅಕ್ಷರ್​ ಪಟೇಲ್​ ಮತ್ತು ಕುಲದೀಪ್​ ಯಾದವ್​ಗೆ ಹೆಚ್ಚು ಅವಕಾಶ ನೀಡಬೇಕು ಎಂದು ಟೀಮ್​ ಇಂಡಿಯಾದ ಮಾಜಿ ಆಟಗಾರ ಸಂಜಯ್​ ಮಂಜ್ರೇಕರ್​ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ವರದಿಯಗಿದೆ.

Ad
Ad
Nk Channel Final 21 09 2023
Ad