News Karnataka Kannada
Monday, April 29 2024
ಕ್ರೀಡೆ

ಚೇತರಿಸಿಕೊಂಡ ಶುಭ್​ಮನ್ ಗಿಲ್, ಅಹಮದಾಬಾದ್​ಗೆ ತೆರಳಲಿದ ಆಟಗಾರ

Shubman Gill recovers, to leave for Ahmedabad
Photo Credit : Twitter

ಮುಂಬೈ: ಏಕದಿನ ಕ್ರಿಕೆಟ್‌ ವಿಶ್ವಕಪ್‌ ಪಂದ್ಯದಲ್ಲಿ ಅಫ್ಗಾನಿಸ್ಥಾನ ತಂಡದ ವಿರುದ್ಧ ಆತಿಥೇಯ ಭಾರತ 8 ವಿಕೆಟ್‌ ಗಳ ಜಯ ಸಾಧಿಸಿದೆ. ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ಅಫ್ಗಾನಿಸ್ಥಾನ ನಿಗದಿತ 50 ಓವರ್‌ ಗಳಲ್ಲಿ 8 ವಿಕೆಟ್‌ ಕಳೆದುಕೊಂಡು, 272 ರನ್‌ ಪಡೆಯಿತು.

ಭಾರತ 35 ಓವರ್‌ ಗಳಲ್ಲಿ 2 ವಿಕೆಟ್‌ ಕಳೆದುಕೊಂಡು ಸುಲಭವಾಗಿ ಗುರಿ ಸಾಧಿಸಿತು. ಇದೀಗ ಅಕ್ಟೋಬರ್ 14 ರಂದು ನಡೆಯಲ್ಲಿರುವ ಹೈವೋಲ್ಟೇಜ್ ಕದನದಲ್ಲಿ ರೋಹಿತ್ ಪಡೆ ಬದ್ಧವೈರಿ ಪಾಕಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯಕ್ಕಾಗಿ ಬಾಬರ್ ಪಡೆ ಈಗಾಗಲೇ ಅಹಮದಾಬಾದ್ ತಲುಪಿದೆ. ಟೀಂ ಇಂಡಿಯಾ ಕೂಡ ಇಷ್ಟರಲ್ಲೇ ಅಹಮದಾಬಾದ್​ಗೆ ತೆರಳಲಿದೆ. ಈ ನಡುವೆ ಟೀಂ ಇಂಡಿಯಾ ಪಾಳಯದಿಂದ ಶುಭ ಸುದ್ದಿ ಹೊರಬಿದ್ದಿದ್ದು, ಡೆಂಗ್ಯೂಗೆ ತುತ್ತಾಗಿ ಟೀಂ ಇಂಡಿಯಾದಿಂದ ಹೊರಬಿದ್ದಿದ್ದ ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಇದೀಗ ತಂಡವನ್ನು ಸೇರಿಕೊಳ್ಳಲು ಅಹಮದಾಬಾದ್​ಗೆ ಬಂದಿಳಿದಿದ್ದಾರೆ.

ಟೀಂ ಇಂಡಿಯಾ ತನ್ನ ವಿಶ್ವಕಪ್ ಅಭಿಯಾನವನ್ನು ಆರಂಭಿಸುವುದಕ್ಕೂ ಮುನ್ನವೇ ಶುಭ್​ಮನ್ ಗಿಲ್ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಮೊದಲ 2 ಪಂದ್ಯಗಳಿಂದ ಹೊರಗಿಡಲಾಗಿತ್ತು. ಅಲ್ಲದೆ ಹೆಚ್ಚಿನ ಚಿಕಿತ್ಸೆಗಾಗಿ ಗಿಲ್​ರನ್ನು ಆಸ್ಪತ್ರೆಗೂ ದಾಖಲಿಸಲಾಗಿತ್ತು. ಆದರೆ ಕೆಲವು ಗಂಟೆಗಳ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಯಿತು.

ಶುಭ್​ಮನ್ ಗಿಲ್ ಆರೋಗ್ಯವಾಗಿದ್ದು, ಅಹಮದಾಬಾದ್‌ಗೆ ಬಂದಿಳಿದಿದ್ದಾರೆ. ಆದರೆ ಗಿಲ್ ಚೇತರಿಸಿಕೊಂಡಿದ್ದರೂ ಗುರುವಾರ ಅಭ್ಯಾಸ ನಡೆಸುವುದಿಲ್ಲ ಎಂಬುದು ಸುದ್ದಿ. ಹಾಗಿದ್ದಲ್ಲಿ, ಪಾಕಿಸ್ತಾನದ ವಿರುದ್ಧ ಆಡುವುದು ಅವರಿಗೆ ಕಷ್ಟಕರವೆಂದು ತೋರುತ್ತದೆ. ಏಕೆಂದರೆ ಅವರ ಸ್ಥಾನದಲ್ಲಿ ಆಡುತ್ತಿರುವ ಇಶಾನ್ ಕಿಶನ್ ಅಫ್ಘಾನಿಸ್ತಾನ ವಿರುದ್ಧ ಉತ್ತಮ ಪ್ರದರ್ಶನ ನೀಡಿದ್ದರು. ಅಲ್ಲದೆ ತಂಡದ ಆಡಳಿತ ಮಂಡಳಿ ಗಿಲ್‌ ವಿಚಾರದಲ್ಲಿ ಯಾವುದೇ ಅಪಾಯವನ್ನು ತೆಗೆದುಕೊಳ್ಳಲು ಬಯಸುವುದಿಲ್ಲ. ಹೀಗಾಗಿ ಗಿಲ್ ಸಂಪೂರ್ಣ ಚೇತರಿಸಿಕೊಂಡ ಬಳಿಕವಷ್ಟೇ ತಂಡದಲ್ಲಿ ಆಡಿಸಲು ತೀರ್ಮಾನಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು