ಕೆನಡಾದಲ್ಲಿ ನಡೆಯುತ್ತಿರುವ BWF ವರ್ಲ್ಡ್ ಟೂರ್ ಸೂಪರ್ 500 ಈವೆಂಟ್ನಲ್ಲಿ ಭಾರತದ ಸ್ಟಾರ್ ಷಟ್ಲರ್ಗಳಾದ ಪಿವಿ ಸಿಂಧು ಮತ್ತು ಲಕ್ಷ್ಯ ಸೇನ್ ಅವರು ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ನೇರ ಗೇಮ್ಗಳ ಗೆಲುವು ದಾಖಲಿಸುವ ಮೂಲಕ ಕೆನಡಾ ಓಪನ್ನ ಪ್ರಿ-ಕ್ವಾರ್ಟರ್ಫೈನಲ್ಗೆ ಲಗ್ಗೆ ಇಟ್ಟಿದ್ದಾರೆ.
12ನೇ ಶ್ರೇಯಾಂಕದ ಸಿಂಧು ಬುಧವಾರ ರಾತ್ರಿ ನಡೆದ ಮಹಿಳೆಯರ ಸಿಂಗಲ್ಸ್ನ ಆರಂಭಿಕ ಪಂದ್ಯದಲ್ಲಿ ಕೆನಡಾದ ತಾಲಿಯಾ ಎನ್ಜಿ ವಿರುದ್ಧ 21-16 21-9 ಅಂತರದ ಸುಲಭ ಜಯ ಸಾಧಿಸುವುದರೊಂದಿಗೆ ಮುಂದಿನ ಸುತ್ತಿಗೆ ಅಂದರೆ, ಪ್ರಿ-ಕ್ವಾರ್ಟರ್ಫೈನಲ್ಗೆ ಎಂಟ್ರಿಕೊಟ್ಟಿದ್ದಾರೆ. ಹಾಗೆಯೇ ಲಕ್ಷ್ಯ ಸೇನ್ ಕೂಡ ಥಾಯ್ಲೆಂಡ್ನ ಕುನ್ಲವುತ್ ವಿಟಿಡ್ಸರ್ನ್ ವಿರುದ್ಧ 21-18 21-15 ಅಂತರದ ಸುಲಭ ಜಯ ಸಾಧಿಸುವುದರೊಂದಿಗೆ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಪ್ರಿ-ಕ್ವಾರ್ಟರ್ಫೈನಲ್ಗೆ ಟಿಕೆಟ್ ಖಚಿತಪಡಿಸಿಕೊಂಡಿದ್ದಾರೆ.
ಇದೀಗ ಎರಡು ಬಾರಿಯ ಒಲಂಪಿಕ್ ಪದಕ ವಿಜೇತೆ ಸಿಂಧು ಅವರು ತಮ್ಮ ಮುಂದಿನ ಪಂದ್ಯದಲ್ಲಿ ಜಪಾನ್ನ ನಟ್ಸುಕಿ ನಿದೈರಾ ಅವರನ್ನು ಎದುರಿಸಲಿದ್ದಾರೆ. ಲಕ್ಷ್ಯ ಸೇನ್ ಪುರುಷರ ಸಿಂಗಲ್ಸ್ ವಿಭಾಗದ ಪ್ರಿ-ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಬ್ರೆಜಿಲ್ನ ಯೊಗೊರ್ ಕೊಯೆಲ್ಹೋ ವಿರುದ್ಧ ಸೆಣಸಲಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…