News Karnataka Kannada
Sunday, May 19 2024
ಕ್ರೀಡೆ

ಟಿ20 ವಿಶ್ವಕಪ್​ಗೆ ಭಯೋತ್ಪಾದಕರ ಬೆದರಿಕೆ !

Crc
Photo Credit : NewsKarnataka

ಮುಂಬೈ: ಜೂನ್ 2 ರಿಂದ 29 ರವರೆಗೆ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್​ಗೆ ಭಯೋತ್ಪಾದಕರು ಬೆದರಿಕೆಯೊಡ್ಡಿದ್ದಾರೆ. ಟೂರ್ನಿಯ ಸಂದರ್ಭದಲ್ಲಿ ದಾಳಿ ನಡೆಸುವುದಾಗಿ ಪಾಕ್ ಮೂಲದ ಉಗ್ರಗಾಮಿ ಸಂಘಟನೆ IS-K (ISKhorasan) ಹೇಳಿಕೊಂಡಿದೆ. ಈ ಬೆದರಿಕೆ ಬೆನ್ನಲ್ಲೇ ಭದ್ರತಾ ಕಾಳಜಿವಹಿಸಲು ಟೂರ್ನಿ ಆಯೋಜಕರು ಮುಂದಾಗಿದ್ದಾರೆ.

ಕೆರಿಬಿಯನ್ ಮಾಧ್ಯಮಗಳ ವರದಿ ಪ್ರಕಾರ, ಉತ್ತರ ಪಾಕಿಸ್ತಾನದಿಂದ ಬೆದರಿಕೆಯೊಡ್ಡಲಾಗಿದ್ದು, ಪಾಕ್-ಅಫ್ಘಾನಿಸ್ತಾನದ ಉಗ್ರಗಾಮಿ ಸಂಘಟನೆ ಐಎಸ್‌ಖೋರಾಸನ್ ಟೂರ್ನಿ ನಡುವೆ ಹಿಂಸಾಚಾರವನ್ನು ಪ್ರಚೋದಿಸಲು ಮುಂದಾಗಿದೆ ಎಂದು ಗುಪ್ತಚರ ವರದಿಗಳು ತಿಳಿಸಿದೆ. ಹೀಗಾಗಿ ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್ ಹಾಗೂ ಯುಎಸ್​ಎ ಟಿ20 ವಿಶ್ವಕಪ್​ ವೇಳೆ ಬಿಗಿ ಭದ್ರತೆ ಒದಗಿಸಲು ನಿರ್ಧರಿಸಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಸಂಪೂರ್ಣ ಭದ್ರತೆಯೊಂದಿಗೆ ಯಶಸ್ವಿಯಾಗಿ ಟಿ20 ವಿಶ್ವಕಪ್ ಆಯೋಜಿಸುವುದಾಗಿ ಕ್ರಿಕೆಟ್ ವೆಸ್ಟ್ ಇಂಡೀಸ್ ಸಿಇಒ ಜಾನಿ ಗ್ರೇವ್ಸ್ ತಿಳಿಸಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು