News Karnataka Kannada
Friday, May 17 2024
ಕ್ರೀಡೆ

ವಿಶ್ವಕಪ್ ಅಭ್ಯಾಸ ಪಂದ್ಯಕ್ಕಾಗಿ ಗುವಾಹಟಿಗೆ ಬಂದ ಟೀಮ್ ಇಂಡಿಯಾ

Team India arrives in Guwahati for World Cup warm-up match
Photo Credit : News Kannada

ಐಸಿಸಿ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳಿಗೆ ಮುನ್ನ ಟೀಮ್ ಇಂಡಿಯಾ ಗುವಾಹಟಿಗೆ ಆಗಮಿಸಿದೆ. ಭಾರತೀಯ ಆಟಗಾರರು ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿದ್ದಂತೆ ಸಾವಿರಾರು ಅಭಿಮಾನಿಗಳು ಭಾರತ ತಂಡಕ್ಕೆ ಜೈಕಾರ ಹಾಕಿದರು. ಗಾಯಗೊಂಡಿರುವ ಅಕ್ಷರ್ ಪಟೇಲ್ ಬದಲಿಗೆ ಅಂತಿಮ ವಿಶ್ವಕಪ್ ತಂಡದಲ್ಲಿ ಸೇರ್ಪಡೆಗೊಂಡಿರುವ ರವಿಚಂದ್ರನ್ ಅಶ್ವಿನ್ ಕೂಡ ಮೆನ್ ಇನ್ ಬ್ಲೂ ಜೊತೆ ಗುವಾಹಟಿಗೆ ಪ್ರಯಾಣ ಬೆಳೆಸಿದರು.

ಅಕ್ಟೋಬರ್ 5 ರಿಂದ ಭಾರತದಲ್ಲಿ ವಿಶ್ವಕಪ್ ಪ್ರಾರಂಭವಾಗುತ್ತಿದೆ. ಟೀಮ್ ಇಂಡಿಯಾ ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಇಂಗ್ಲೆಂಡ್ ಅನ್ನು ಎದುರಿಸಲಿದೆ ಮತ್ತು ಅಕ್ಟೋಬರ್ 3 ರಂದು ನೆದರ್ಲೆಂಡ್ಸ್ ವಿರುದ್ಧ ತಮ್ಮ ಅಂತಿಮ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು, ಇದು ತಿರುವನಂತಪುರಂನಲ್ಲಿ ನಡೆಯಲಿದೆ.

2023ರ ವಿಶ್ವಕಪ್‌ಗೆ ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್.ಇಶಾನ್ ಕಿಶನ್, ಕೆಎಲ್ ರಾಹುಲ್. ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶಾರ್ದೂಲ್ ಠಾಕೂರ್. ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್.
ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್. ಕುಲ್ದೀಪ್ ಯಾದವ್.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು